AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್, ಬಾರ್ ನಿಗದಿತ ಸಮಯದಲ್ಲಿ ಬಂದ್ ಮತ್ತು ಅಪ್ರಾಪ್ತರಿಗೆ ಪ್ರವೇಶ ನಿಷೇಧ; ಬೆಂಗಳೂರು ಪೊಲೀಸರಿಂದ ಆದೇಶ

ಬಾರ್ ಮತ್ತು ಪಬ್​​ಗಳನ್ನು ನಿಗದಿತ ಸಮಯದಲ್ಲಿ ಬಂದ್ ಮಾಡಬೇಕು ಮತ್ತು ಅಪ್ರಾಪ್ತರಿಗೆ  ಪ್ರವೇಶ ನಿಷೇಧಿಸಿ ಬೆಂಗಳೂರು ಪೊಲೀಸರು ಆದೇಶ ಹೊರಡಿಸಿದ್ದಾರೆ.

ಪಬ್, ಬಾರ್ ನಿಗದಿತ ಸಮಯದಲ್ಲಿ ಬಂದ್ ಮತ್ತು ಅಪ್ರಾಪ್ತರಿಗೆ ಪ್ರವೇಶ ನಿಷೇಧ; ಬೆಂಗಳೂರು ಪೊಲೀಸರಿಂದ ಆದೇಶ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Aug 10, 2022 | 2:10 PM

Share

ಬೆಂಗಳೂರು: ಬಾರ್ (Bar) ಮತ್ತು ಪಬ್​​ಗಳನ್ನು (Pub) ನಿಗದಿತ ಸಮಯದಲ್ಲಿ ಬಂದ್ ಮಾಡಬೇಕು ಮತ್ತು ಅಪ್ರಾಪ್ತರಿಗೆ  ಪ್ರವೇಶ ನಿಷೇಧಿಸಿ ಬೆಂಗಳೂರು ಪೊಲೀಸರು (Bengaluru Police) ಆದೇಶ ಹೊರಡಿಸಿದ್ದಾರೆ. ಬಾರ್ ಮತ್ತು ಪಬ್​ ಮಾಲಿಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಬೆಂಗಳೂರು ಪೊಲೀಸರು ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಅಪ್ರಾಪ್ತರಿಗೆ ಪ್ರವೇಶ ನೀಡಿದ್ದ ಪಬ್ ಮತ್ತು ಬಾರ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರತಿನಿತ್ಯ ಎಲ್ಲಾ ಪಬ್ ಮತ್ತು ಬಾರ್​ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘಿಸಿದ ಕೇಂದ್ರ ವಿಭಾಗದ 9 ಪಬ್ ಅಂಡ್ ಬಾರ್ ಮೇಲೆ ಪ್ರಕರಣ ದಾಖಲಾಗಿದೆ. ಪಶ್ಚಿಮ ವಿಭಾಗದಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಪೂರ್ವ ವಿಭಾಗದಲ್ಲಿ 79 ಪಬ್ ಮತ್ತು ಬಾರ್​ಗಳಲ್ಲಿ ಏಕಕಾಲಕ್ಕೆ ಪರಿಶೀಲನೆ ಮಾಡಲಾಗಿದೆ. ಉತ್ತರ ವಿಭಾಗದಲ್ಲಿ ಒಟ್ಟು 3 ಪ್ರಕರಣ ದಾಖಲಾಗಿದೆ. ಅಗ್ನೇಯ ವಿಭಾಗದಲ್ಲಿ ನಿಯಮ ಉಲ್ಲಂಘಿಸಿದ 2 ಪಬ್ ಮತ್ತು ಬಾರ್ ಮೇಲೆ ಪ್ರಕರಣ ದಾಖಲಾಗಿದೆ.

ದಕ್ಷಿಣ ವಿಭಾಗದ 2 ಪಬ್ ಮತ್ತು ಬಾರ್ ಮೇಲೆ ಪ್ರಕರಣ ದಾಖಲಾಗಿದೆ. ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡುತ್ತಿದ್ದ ಬಾರ್ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಅಪ್ರಾಪ್ತರನ್ನು ಬಾರ್ಗೆ ಕರೆದು ಕೊಂಡು ಹೋದವರ ಮೇಲೂ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸುತ್ತಿದ್ದಾರೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ