Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ

ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Dec 29, 2020 | 4:43 PM

ಬೆಂಗಳೂರು: ಇವತ್ತು ಪಶ್ಚಿಮ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 1ಕೋಟಿ 97 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಮಾಹಿತಿ ನೀಡಿದ್ದಾರೆ.

ವಿಜಯನಗರ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ, ಮನೆಗಳ್ಳತನ ಸೇರಿ 27 ಪ್ರಕರಣಗಳನ್ನು ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದಿಂದ ಬಂದಿದ್ದ ಹಲವರು ಬೆಂಗಳೂರಿನಲ್ಲಿ ಸರಗಳ್ಳತನ ಮಾಡಿದ್ದಾರೆ. ಈ ಸಂಬಂಧ ಆರೋಪಿಗಳನ್ನು ಬಂಧಿಸಲು ಧಾರವಾಡಕ್ಕೆ ಹೋಗಲಾಗಿತ್ತು.

ಆಗ ಇಡೀ ಗ್ರಾಮಸ್ಥರೆಲ್ಲ ಸೇರಿಕೊಂಡು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಒಬ್ಬರು ಮಹಿಳಾ ಪಿಎಸ್​ಐ ಸೇರಿ ಮೂವರ ಮೇಲೆ ಹಲ್ಲೆ ನಡೆದಿತ್ತು. ಇದೀಗ ಆ ಆರೋಪಿಗಳಾದ ಸಲೀಂ ಇರಾನಿ, ಅಜಾದ್ ಇರಾನಿ, ಅವ್ನೂ ಇರಾನಿ‌ಯನ್ನು (Irani Gang) ಬಂಧಿಸಲಾಗಿದೆ ಎಂದು ಪಂತ್​ ತಿಳಿಸಿದ್ದಾರೆ. ಹಾಗೇ ಕಾರ್ಯಾಚರಣೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟಿಲ್ ನೇತೃತ್ವದ ತಂಡಕ್ಕೆ 50 ಸಾವಿರ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

ಹಾಗೇ ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಆನಂದ್, ಯಾಕೂಬ್, ಲಿಂಗಪ್ಪ, ಕೆ.ಲೋಕೇಶ್, ವಿ.ಲೋಕೇಶ್​ನನ್ನು ಬಂಧಿಸಲಾಗಿದೆ. ಇದನ್ನು ಭೇದಿಸಿದ ಪೊಲೀಸ್​ ತಂಡಕ್ಕೆ ಕಮಲ್​ಪಂತ್ 30 ಸಾವಿರ ರೂ.ಬಹುಮಾನ ಘೋಷಿಸಿದ್ದಾರೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

Published On - 3:37 pm, Tue, 29 December 20

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ