AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ

ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on:Dec 29, 2020 | 4:43 PM

Share

ಬೆಂಗಳೂರು: ಇವತ್ತು ಪಶ್ಚಿಮ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 1ಕೋಟಿ 97 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಮಾಹಿತಿ ನೀಡಿದ್ದಾರೆ.

ವಿಜಯನಗರ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ, ಮನೆಗಳ್ಳತನ ಸೇರಿ 27 ಪ್ರಕರಣಗಳನ್ನು ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದಿಂದ ಬಂದಿದ್ದ ಹಲವರು ಬೆಂಗಳೂರಿನಲ್ಲಿ ಸರಗಳ್ಳತನ ಮಾಡಿದ್ದಾರೆ. ಈ ಸಂಬಂಧ ಆರೋಪಿಗಳನ್ನು ಬಂಧಿಸಲು ಧಾರವಾಡಕ್ಕೆ ಹೋಗಲಾಗಿತ್ತು.

ಆಗ ಇಡೀ ಗ್ರಾಮಸ್ಥರೆಲ್ಲ ಸೇರಿಕೊಂಡು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಒಬ್ಬರು ಮಹಿಳಾ ಪಿಎಸ್​ಐ ಸೇರಿ ಮೂವರ ಮೇಲೆ ಹಲ್ಲೆ ನಡೆದಿತ್ತು. ಇದೀಗ ಆ ಆರೋಪಿಗಳಾದ ಸಲೀಂ ಇರಾನಿ, ಅಜಾದ್ ಇರಾನಿ, ಅವ್ನೂ ಇರಾನಿ‌ಯನ್ನು (Irani Gang) ಬಂಧಿಸಲಾಗಿದೆ ಎಂದು ಪಂತ್​ ತಿಳಿಸಿದ್ದಾರೆ. ಹಾಗೇ ಕಾರ್ಯಾಚರಣೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟಿಲ್ ನೇತೃತ್ವದ ತಂಡಕ್ಕೆ 50 ಸಾವಿರ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

ಹಾಗೇ ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಆನಂದ್, ಯಾಕೂಬ್, ಲಿಂಗಪ್ಪ, ಕೆ.ಲೋಕೇಶ್, ವಿ.ಲೋಕೇಶ್​ನನ್ನು ಬಂಧಿಸಲಾಗಿದೆ. ಇದನ್ನು ಭೇದಿಸಿದ ಪೊಲೀಸ್​ ತಂಡಕ್ಕೆ ಕಮಲ್​ಪಂತ್ 30 ಸಾವಿರ ರೂ.ಬಹುಮಾನ ಘೋಷಿಸಿದ್ದಾರೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

Published On - 3:37 pm, Tue, 29 December 20

Follow Us
Lakshmi Hegde
Lakshmi Hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ