AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ

ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
Lakshmi Hegde
| Edited By: |

Updated on:Dec 29, 2020 | 4:43 PM

Share

ಬೆಂಗಳೂರು: ಇವತ್ತು ಪಶ್ಚಿಮ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 1ಕೋಟಿ 97 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಮಾಹಿತಿ ನೀಡಿದ್ದಾರೆ.

ವಿಜಯನಗರ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ, ಮನೆಗಳ್ಳತನ ಸೇರಿ 27 ಪ್ರಕರಣಗಳನ್ನು ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದಿಂದ ಬಂದಿದ್ದ ಹಲವರು ಬೆಂಗಳೂರಿನಲ್ಲಿ ಸರಗಳ್ಳತನ ಮಾಡಿದ್ದಾರೆ. ಈ ಸಂಬಂಧ ಆರೋಪಿಗಳನ್ನು ಬಂಧಿಸಲು ಧಾರವಾಡಕ್ಕೆ ಹೋಗಲಾಗಿತ್ತು.

ಆಗ ಇಡೀ ಗ್ರಾಮಸ್ಥರೆಲ್ಲ ಸೇರಿಕೊಂಡು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಒಬ್ಬರು ಮಹಿಳಾ ಪಿಎಸ್​ಐ ಸೇರಿ ಮೂವರ ಮೇಲೆ ಹಲ್ಲೆ ನಡೆದಿತ್ತು. ಇದೀಗ ಆ ಆರೋಪಿಗಳಾದ ಸಲೀಂ ಇರಾನಿ, ಅಜಾದ್ ಇರಾನಿ, ಅವ್ನೂ ಇರಾನಿ‌ಯನ್ನು (Irani Gang) ಬಂಧಿಸಲಾಗಿದೆ ಎಂದು ಪಂತ್​ ತಿಳಿಸಿದ್ದಾರೆ. ಹಾಗೇ ಕಾರ್ಯಾಚರಣೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟಿಲ್ ನೇತೃತ್ವದ ತಂಡಕ್ಕೆ 50 ಸಾವಿರ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

ಹಾಗೇ ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಆನಂದ್, ಯಾಕೂಬ್, ಲಿಂಗಪ್ಪ, ಕೆ.ಲೋಕೇಶ್, ವಿ.ಲೋಕೇಶ್​ನನ್ನು ಬಂಧಿಸಲಾಗಿದೆ. ಇದನ್ನು ಭೇದಿಸಿದ ಪೊಲೀಸ್​ ತಂಡಕ್ಕೆ ಕಮಲ್​ಪಂತ್ 30 ಸಾವಿರ ರೂ.ಬಹುಮಾನ ಘೋಷಿಸಿದ್ದಾರೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

Published On - 3:37 pm, Tue, 29 December 20

Follow Us
Lakshmi Hegde
Lakshmi Hegde
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ