AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ

ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
Lakshmi Hegde
| Edited By: |

Updated on:Dec 29, 2020 | 4:43 PM

Share

ಬೆಂಗಳೂರು: ಇವತ್ತು ಪಶ್ಚಿಮ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 1ಕೋಟಿ 97 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಮಾಹಿತಿ ನೀಡಿದ್ದಾರೆ.

ವಿಜಯನಗರ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ, ಮನೆಗಳ್ಳತನ ಸೇರಿ 27 ಪ್ರಕರಣಗಳನ್ನು ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದಿಂದ ಬಂದಿದ್ದ ಹಲವರು ಬೆಂಗಳೂರಿನಲ್ಲಿ ಸರಗಳ್ಳತನ ಮಾಡಿದ್ದಾರೆ. ಈ ಸಂಬಂಧ ಆರೋಪಿಗಳನ್ನು ಬಂಧಿಸಲು ಧಾರವಾಡಕ್ಕೆ ಹೋಗಲಾಗಿತ್ತು.

ಆಗ ಇಡೀ ಗ್ರಾಮಸ್ಥರೆಲ್ಲ ಸೇರಿಕೊಂಡು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಒಬ್ಬರು ಮಹಿಳಾ ಪಿಎಸ್​ಐ ಸೇರಿ ಮೂವರ ಮೇಲೆ ಹಲ್ಲೆ ನಡೆದಿತ್ತು. ಇದೀಗ ಆ ಆರೋಪಿಗಳಾದ ಸಲೀಂ ಇರಾನಿ, ಅಜಾದ್ ಇರಾನಿ, ಅವ್ನೂ ಇರಾನಿ‌ಯನ್ನು (Irani Gang) ಬಂಧಿಸಲಾಗಿದೆ ಎಂದು ಪಂತ್​ ತಿಳಿಸಿದ್ದಾರೆ. ಹಾಗೇ ಕಾರ್ಯಾಚರಣೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟಿಲ್ ನೇತೃತ್ವದ ತಂಡಕ್ಕೆ 50 ಸಾವಿರ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

ಹಾಗೇ ಕಾಮಾಕ್ಷಿ ಪಾಳ್ಯ ಪೊಲೀಸರೂ ಸಹ ಹಲವು ಪ್ರಕರಣಗಳನ್ನು ಭೇದಿಸಿ, 1 ಕೋಟಿ 46 ಲಕ್ಷ ರೂ.ಮೌಲ್ಯದ 26 ಟ್ರ್ಯಾಕ್ಟರ್​, 5 ಕಾರು, 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಆನಂದ್, ಯಾಕೂಬ್, ಲಿಂಗಪ್ಪ, ಕೆ.ಲೋಕೇಶ್, ವಿ.ಲೋಕೇಶ್​ನನ್ನು ಬಂಧಿಸಲಾಗಿದೆ. ಇದನ್ನು ಭೇದಿಸಿದ ಪೊಲೀಸ್​ ತಂಡಕ್ಕೆ ಕಮಲ್​ಪಂತ್ 30 ಸಾವಿರ ರೂ.ಬಹುಮಾನ ಘೋಷಿಸಿದ್ದಾರೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

Published On - 3:37 pm, Tue, 29 December 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​