AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ. ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ […]

ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು
Follow us
ಸಾಧು ಶ್ರೀನಾಥ್​
|

Updated on:Nov 22, 2019 | 6:38 PM

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ.

ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ.

ನಿನ್ನೆಯಷ್ಟೇ ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ರಾಹುಲ್​ನನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಮತ್ತೆ ನಗರದಲ್ಲಿ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಈ ಮಧ್ಯೆ, ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಪೊಲೀಸರು ರೌಡಿಪರೇಡ್ ನಡೆಸಿದರು. ಹೊಸಕೋಟೆ ಠಾಣೆ ಎದುರು ಸುಮಾರು 80ಕ್ಕೂ ಹೆಚ್ಚು ರೌಡಿಗಳನ್ನ ಕರೆಸಿ ವಾರ್ನಿಂಗ್ ನೀಡಿದ್ದಾರೆ. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಯಾವುದೇ ಪಕ್ಷಗಳ ಪರವಾಗಿ ಮತ ಹಾಕದಂತೆ ಸಾರ್ವಜನಿಕರನ್ನ ಬೆದರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಡಿವೈಎಸ್ಪಿ‌ ಸಕ್ರಿ ಹಾಗೂ ಸರ್ಕಲ್ ಇನ್ಸಪೆಕ್ಟರ್ ಶಿವರಾಜ್, ಎಎಸ್ ಪಿ ಸಜೀತ್ ನೇತೃತ್ವದಲ್ಲಿ ರೌಡಿ ಪರೇಡ್ ನಡೆಯಿತು. 

Published On - 5:21 pm, Fri, 22 November 19

ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?