AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ. ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ […]

ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು
ಸಾಧು ಶ್ರೀನಾಥ್​
|

Updated on:Nov 22, 2019 | 6:38 PM

Share

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ.

ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ.

ನಿನ್ನೆಯಷ್ಟೇ ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ರಾಹುಲ್​ನನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಮತ್ತೆ ನಗರದಲ್ಲಿ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಈ ಮಧ್ಯೆ, ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಪೊಲೀಸರು ರೌಡಿಪರೇಡ್ ನಡೆಸಿದರು. ಹೊಸಕೋಟೆ ಠಾಣೆ ಎದುರು ಸುಮಾರು 80ಕ್ಕೂ ಹೆಚ್ಚು ರೌಡಿಗಳನ್ನ ಕರೆಸಿ ವಾರ್ನಿಂಗ್ ನೀಡಿದ್ದಾರೆ. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಯಾವುದೇ ಪಕ್ಷಗಳ ಪರವಾಗಿ ಮತ ಹಾಕದಂತೆ ಸಾರ್ವಜನಿಕರನ್ನ ಬೆದರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಡಿವೈಎಸ್ಪಿ‌ ಸಕ್ರಿ ಹಾಗೂ ಸರ್ಕಲ್ ಇನ್ಸಪೆಕ್ಟರ್ ಶಿವರಾಜ್, ಎಎಸ್ ಪಿ ಸಜೀತ್ ನೇತೃತ್ವದಲ್ಲಿ ರೌಡಿ ಪರೇಡ್ ನಡೆಯಿತು. 

Published On - 5:21 pm, Fri, 22 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!