ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ. ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ […]

ಚುನಾವಣೆ ಕಾಲ: ಮತ್ತಿಬ್ಬರು ರೌಡಿ​ಗಳನ್ನ ಜೈಲಿಗಟ್ಟಿದ ಬೆಂಗಳೂರು ಪೊಲೀಸರು
ಸಾಧು ಶ್ರೀನಾಥ್​

Updated on: Nov 22, 2019 | 6:38 PM

ಬೆಂಗಳೂರು: ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶ್ರೀಧರ್ ಬಿ.ಎಂ ಅಲಿಯಾಸ್ ಸೋಡ ಹಾಗೂ ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್​ನನ್ನು ಬಂಧಿಸಿದ್ದಾರೆ.

ಶ್ರೀಧರ್ ವಿರುದ್ಧ ಕೊಲೆ, ದೊಂಬಿ, ಹಲ್ಲೆ ಸೇರಿದಂತೆ 8ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸಂತೋಷ್ ವಿರುದ್ಧ ಕೊಲೆ ಪ್ರಯತ್ನ, ಸುಲಿಗೆ ಸೇರಿದಂತೆ 16ಕ್ಕೂ ಅಧಿಕ ಪ್ರಕರಣಗಳಿವೆ. ಮತ್ತೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಇಬ್ಬರ ವಿರುದ್ಧವೂ ಕೇಂದ್ರ ವಿಭಾಗದ ಪೊಲೀಸರು ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ.

ನಿನ್ನೆಯಷ್ಟೇ ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ರಾಹುಲ್​ನನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಮತ್ತೆ ನಗರದಲ್ಲಿ ಇಬ್ಬರು ರೌಡಿಶೀಟರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ
ಈ ಮಧ್ಯೆ, ಹೊಸಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಪೊಲೀಸರು ರೌಡಿಪರೇಡ್ ನಡೆಸಿದರು. ಹೊಸಕೋಟೆ ಠಾಣೆ ಎದುರು ಸುಮಾರು 80ಕ್ಕೂ ಹೆಚ್ಚು ರೌಡಿಗಳನ್ನ ಕರೆಸಿ ವಾರ್ನಿಂಗ್ ನೀಡಿದ್ದಾರೆ. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಯಾವುದೇ ಪಕ್ಷಗಳ ಪರವಾಗಿ ಮತ ಹಾಕದಂತೆ ಸಾರ್ವಜನಿಕರನ್ನ ಬೆದರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಡಿವೈಎಸ್ಪಿ‌ ಸಕ್ರಿ ಹಾಗೂ ಸರ್ಕಲ್ ಇನ್ಸಪೆಕ್ಟರ್ ಶಿವರಾಜ್, ಎಎಸ್ ಪಿ ಸಜೀತ್ ನೇತೃತ್ವದಲ್ಲಿ ರೌಡಿ ಪರೇಡ್ ನಡೆಯಿತು. 

Published On - 5:21 pm, Fri, 22 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us