AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿ ನಗದು ಹಣವಿಲ್ಲ ಎಂದು ನುಣುಚಿಕೊಳ್ಳುವಂತಿಲ್ಲ… ಏಕೆ ಗೊತ್ತಾ?

ಬೆಂಗಳೂರಿನಲ್ಲಿ ಇನ್ನು ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಗೆ ನಗದು ಹಣವಿಲ್ಲ ಎನ್ನುವ ಸಬೂಬು ಹೇಳಿ ತಪ್ಪಿಸಿಕೊಳ್ಳುವ ಹಾಗಿಲ್ಲ. ಕಾರಣ, ಡಿಜಿಟಲ್ ಪಾವತಿ ಮೂಲಕ ದಂಡ ಕಟ್ಟಲು ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿ ನಗದು ಹಣವಿಲ್ಲ ಎಂದು ನುಣುಚಿಕೊಳ್ಳುವಂತಿಲ್ಲ… ಏಕೆ ಗೊತ್ತಾ?
ಪೇಟಿಎಂ ಮೂಲಕ ಡಿಜಿಟಲ್ ದಂಡ ಪಾವತಿ ವ್ಯವಸ್ಥೆ ಉದ್ಘಾಟಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Jul 05, 2021 | 6:15 PM

Share

ಬೆಂಗಳೂರು: ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುವ ವಾಹನಗಳಿಗೆ ಪೊಲೀಸರು ದಂಡ ವಿಧಿಸಿದರೆ, ನಗದು ಹಣವಿಲ್ಲ ಎಂದು ಹೇಳಿ ನುಣುಚಿಕೊಳ್ಳುವ ಸಂದರ್ಭ ಇನ್ನು ಮುಂದೆ ಬರುವುದಿಲ್ಲ. ಹೌದು. ಬೆಂಗಳೂರಿನಲ್ಲಿ ಇಂದು ಪೇಟಿಎಂ ಮೂಲಕ ದಂಡ ಪಾವತಿ ತಂತ್ರಜ್ಞಾನಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್​ ಪಂತ್ ಈ ನೂತನ ತಂತ್ರಜ್ಞಾನಕ್ಕೆ ಚಾಲನೆ ನೀಡಿದ್ದಾರೆ.

ಈ ಮೊದಲು ಡಿಜಿಟಲ್ ಮೂಲಕ ದಂಡ ಪಾವತಿಗೆ ಅವಕಾಶವಿರಲಿಲ್ಲ. ದಂಡವೇನಿದ್ದರೂ ನಗದು ರೂಪದಲ್ಲಿಯೇ ಪೊಲೀಸರಿಗೆ ಕಟ್ಟಬೇಕಿತ್ತು. ಈಗ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದರೆ ಪೇಟಿಎಂ ಡಿಜಿಟಲ್ ತಂತ್ರಜ್ಞಾನದ ಮೂಲಕ ದಂಡ ಪಾವತಿ ಮಾಡಬಹುದಾಗಿದೆ.

ಕರೊನಾ ಸಮಸ್ಯೆಯೂ ಇರುವುದರಿಂದ ನಗದು ರಹಿತ ದಂಡ ಪಾವತಿಗೆ ಪೊಲಿಸ್ ಇಲಾಖೆ ಈ ಮಾದರಿಯನ್ನು ಕಂಡುಕೊಂಡಿದೆ. ಟೆಲಿಬ್ರಹ್ಮ ಸಾಫ್ಟ್​​ವೇರ್ ಸರ್ವಿಸಸ್ ಇದಕ್ಕೆ ಸಹಯೋಗ ನೀಡಿದೆ. ವೆಬ್​ಸೈಟ್, ಪಿಡಿಎ ಮಷೀನ್​ಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ನಗದು ರಹಿತ ದಂಡ ಪಾವತಿಗೆ ರೂಪಿಸಿದ ಈ ಹೊಸ ಮಾರ್ಗದಿಂದಾಗಿ ಇನ್ನು ಮುಂದೆ ದಂಡ ಕಟ್ಟದೆ ತಪ್ಪಿಸುವುದು ಕಡಿಮೆಯಾಗಲಿದೆ.

ಇದನ್ನೂ ಓದಿ: Shopsy App: ಸ್ಥಳೀಯ ಉದ್ಯಮಿಗಳ ನೆರವಿಗಾಗಿ ಫ್ಲಿಪ್​ಕಾರ್ಟ್​ನಿಂದ ಆರಂಭವಾಯಿತು ಹೊಸ ಆ್ಯಪ್​​; ಇದರ ಕೆಲಸ ಏನು ಗೊತ್ತಾ?

ಇದನ್ನೂ ಓದಿ: ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!

(Bengaluru traffic police starts digital payment system for traffic fines)

Published On - 6:14 pm, Mon, 5 July 21

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ