Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿ ನಗದು ಹಣವಿಲ್ಲ ಎಂದು ನುಣುಚಿಕೊಳ್ಳುವಂತಿಲ್ಲ… ಏಕೆ ಗೊತ್ತಾ?

ಬೆಂಗಳೂರಿನಲ್ಲಿ ಇನ್ನು ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಗೆ ನಗದು ಹಣವಿಲ್ಲ ಎನ್ನುವ ಸಬೂಬು ಹೇಳಿ ತಪ್ಪಿಸಿಕೊಳ್ಳುವ ಹಾಗಿಲ್ಲ. ಕಾರಣ, ಡಿಜಿಟಲ್ ಪಾವತಿ ಮೂಲಕ ದಂಡ ಕಟ್ಟಲು ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿ ನಗದು ಹಣವಿಲ್ಲ ಎಂದು ನುಣುಚಿಕೊಳ್ಳುವಂತಿಲ್ಲ… ಏಕೆ ಗೊತ್ತಾ?
ಪೇಟಿಎಂ ಮೂಲಕ ಡಿಜಿಟಲ್ ದಂಡ ಪಾವತಿ ವ್ಯವಸ್ಥೆ ಉದ್ಘಾಟಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
Follow us
TV9 Web
| Updated By: shivaprasad.hs

Updated on:Jul 05, 2021 | 6:15 PM

ಬೆಂಗಳೂರು: ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುವ ವಾಹನಗಳಿಗೆ ಪೊಲೀಸರು ದಂಡ ವಿಧಿಸಿದರೆ, ನಗದು ಹಣವಿಲ್ಲ ಎಂದು ಹೇಳಿ ನುಣುಚಿಕೊಳ್ಳುವ ಸಂದರ್ಭ ಇನ್ನು ಮುಂದೆ ಬರುವುದಿಲ್ಲ. ಹೌದು. ಬೆಂಗಳೂರಿನಲ್ಲಿ ಇಂದು ಪೇಟಿಎಂ ಮೂಲಕ ದಂಡ ಪಾವತಿ ತಂತ್ರಜ್ಞಾನಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್​ ಪಂತ್ ಈ ನೂತನ ತಂತ್ರಜ್ಞಾನಕ್ಕೆ ಚಾಲನೆ ನೀಡಿದ್ದಾರೆ.

ಈ ಮೊದಲು ಡಿಜಿಟಲ್ ಮೂಲಕ ದಂಡ ಪಾವತಿಗೆ ಅವಕಾಶವಿರಲಿಲ್ಲ. ದಂಡವೇನಿದ್ದರೂ ನಗದು ರೂಪದಲ್ಲಿಯೇ ಪೊಲೀಸರಿಗೆ ಕಟ್ಟಬೇಕಿತ್ತು. ಈಗ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದರೆ ಪೇಟಿಎಂ ಡಿಜಿಟಲ್ ತಂತ್ರಜ್ಞಾನದ ಮೂಲಕ ದಂಡ ಪಾವತಿ ಮಾಡಬಹುದಾಗಿದೆ.

ಕರೊನಾ ಸಮಸ್ಯೆಯೂ ಇರುವುದರಿಂದ ನಗದು ರಹಿತ ದಂಡ ಪಾವತಿಗೆ ಪೊಲಿಸ್ ಇಲಾಖೆ ಈ ಮಾದರಿಯನ್ನು ಕಂಡುಕೊಂಡಿದೆ. ಟೆಲಿಬ್ರಹ್ಮ ಸಾಫ್ಟ್​​ವೇರ್ ಸರ್ವಿಸಸ್ ಇದಕ್ಕೆ ಸಹಯೋಗ ನೀಡಿದೆ. ವೆಬ್​ಸೈಟ್, ಪಿಡಿಎ ಮಷೀನ್​ಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ನಗದು ರಹಿತ ದಂಡ ಪಾವತಿಗೆ ರೂಪಿಸಿದ ಈ ಹೊಸ ಮಾರ್ಗದಿಂದಾಗಿ ಇನ್ನು ಮುಂದೆ ದಂಡ ಕಟ್ಟದೆ ತಪ್ಪಿಸುವುದು ಕಡಿಮೆಯಾಗಲಿದೆ.

ಇದನ್ನೂ ಓದಿ: Shopsy App: ಸ್ಥಳೀಯ ಉದ್ಯಮಿಗಳ ನೆರವಿಗಾಗಿ ಫ್ಲಿಪ್​ಕಾರ್ಟ್​ನಿಂದ ಆರಂಭವಾಯಿತು ಹೊಸ ಆ್ಯಪ್​​; ಇದರ ಕೆಲಸ ಏನು ಗೊತ್ತಾ?

ಇದನ್ನೂ ಓದಿ: ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!

(Bengaluru traffic police starts digital payment system for traffic fines)

Published On - 6:14 pm, Mon, 5 July 21

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ