AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹೀಲಿಂಗ್​​ಗೆ ಕಡಿವಾಣ ಹಾಕಲು ಹೊಸ ಟಾಸ್ಕ್ ಫೋರ್ಸ್​ ರಚನೆ; ನಾಲ್ಕೇ ದಿನದಲ್ಲಿ 6 ಜನ ಅರೆಸ್ಟ್

Police Task Force Team: ಇನ್ಸ್ಟ್ರಾಗ್ರಾಂ, ಫೇಸ್ ಬುಕ್ ಸೇರಿ ಹಲವು ಸೋಷಿಯಲ್ ಮೀಡಿಯಾ ಅಪ್ಲಿಕೇಶನ್​ಗಳ ಮೇಲೆ ಸದಾ ಕಣ್ಣಿಡಲಿದೆ ಈ ಟೀಂ.

ವ್ಹೀಲಿಂಗ್​​ಗೆ ಕಡಿವಾಣ ಹಾಕಲು ಹೊಸ ಟಾಸ್ಕ್ ಫೋರ್ಸ್​ ರಚನೆ; ನಾಲ್ಕೇ ದಿನದಲ್ಲಿ 6 ಜನ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Jan 05, 2023 | 10:25 AM

ಬೆಂಗಳೂರು: ನಗರದಲ್ಲಿ ಹೆಚ್ಚಾಗುತ್ತಿರುವ ವ್ಹೀಲಿಂಗ್​​ಗೆ ಕಡಿವಾಣ ಹಾಕಲು ಹೊಸ ಟಾಸ್ಕ್ ಫೋರ್ಸ್​ ರಚನೆ ಮಾಡಲಾಗಿದೆ. ಜಂಟಿ ಪೊಲೀಸ್ ಆಯುಕ್ತ ಅನುಚೇತ್ ನೇತೃತ್ವದಲ್ಲಿ ಓರ್ವ ಎಸಿಪಿ, ಇನ್ಸ್​​ಪೆಕ್ಟರ್​​ ಸೇರಿ 10 ಜನರ ಟಾಸ್ಕ್​​​ಫೋರ್ಸ್ ರಚಿಸಲಾಗಿದ್ದು ಈ ತಂಡ ರಚನೆಯಾದ ನಾಲ್ಕೇ ದಿನದಲ್ಲಿ 6 ಜನನ್ನು ಬಂಧಿಸಲಾಗಿದೆ. ಟಾಸ್ಕ್​ಫೋರ್ಸ್ ಟೀಂ ರಾತ್ರಿ ವೇಳೆಯೂ ಫುಲ್​ ಅಲರ್ಟ್​​​ ಆಗಿದೆ.

ಬೆಂಗಳೂರಿನ ಪ್ರಮುಖ ರಸ್ತೆ, ಹೈವೆಗಳಲ್ಲಿ ಬೈಕ್​​ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಘೂ ಸಾಮಾಜಿಕ ಜಾಲತಾಣಗಳಲ್ಲಿ ವ್ಹೀಲಿಂಗ್ ವಿಡಿಯೋಗಳು ವೈರಲ್ ಆಗುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. 10 ಜನರಿರುವ ತಂಡವನ್ನು ರಚಿಸಿ ಬೇಟೆಗೆ ಇಳಿದಿದ್ದಾರೆ.

ಇದನ್ನೂ ಓದಿ: ನಿಮಗೂ ದಿಂಬಿನ ಕೆಳಗೆ ಮೊಬೈಲ್​ ಇಟ್ಟುಕೊಂಡು ಮಲಗುವ ಅಭ್ಯಾಸವಿದೆಯೇ? ಕೂಡಲೇ ಬಿಟ್ಟುಬಿಡಿ

ಹೊಸ ಟಾಸ್ಕ್ ಪೋರ್ಸ್ ಕಾರ್ಯ ವೈಖರಿ ಹೇಗಿರಲಿದೆ?

ವೀಲ್ಹಿಂಗ್ ಮಾಡೋರ ಮೇಲೆ ನಿಗಾ ಇಡಲು ಟಾಸ್ಕ್ ಪೋರ್ಸ್ ಟೀಂ ಕೆಲಸ ಮಾಡಲಿದೆ. ಇನ್ಸ್ಟ್ರಾಗ್ರಾಂ, ಫೇಸ್ ಬುಕ್ ಸೇರಿ ಹಲವು ಸೋಷಿಯಲ್ ಮೀಡಿಯಾ ಅಪ್ಲಿಕೇಶನ್​ಗಳ ಮೇಲೆ ಸದಾ ಕಣ್ಣಿಡಲಿದೆ ಈ ಟೀಂ. ವೀಲ್ಹಿಂಗ್ ಮಾಡಿ ಅಪ್ಲೋಡ್ ಮಾಡಿದ್ದೇ ತಡ ಟೀಂ ತನಿಖೆ ಚುರುಕು ಮಾಡಿ ಐಪಿ ಅಡ್ರಸ್ ಮೂಲಕ ವೀಲ್ಹಿಂಗ್ ಮಾಡುವವರನ್ನು ಕಂಡುಹಿಡಿಯಲಿದ್ದಾರೆ. ಬಳಿಕ ನೇರವಾಗಿ ಮನೆ ಬಾಗಿಲಿಗೆ ಬಂದು ಬೈಕ್ ಸಮೇತ ಅರೆಸ್ಟ್ ಮಾಡ್ತಾರೆ.

ಟಾಸ್ಕ್ ಪೋರ್ಸ್ ಟೀಂ ರಚನೆ ಆದ ನಾಲ್ಕೇ ದಿನದಲ್ಲಿ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ರಾತ್ರಿ ವೇಳೆಯೂ ಈ ಟೀಮ್ ಹೆಚ್ಚಿನ ನಿಗಾ ಇಡಲಿದೆ. ರಾತ್ರಿ ವೇಳೆ ನೈಸ್​ ರಸ್ತೆ ಹಾಗೂ ಫ್ಲೈ ಓವರ್​ಗಳ ಬಳಿ ಈ ಟೀಮ್ ಹದ್ದಿನ ಕಣ್ಣಿಡಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:25 am, Thu, 5 January 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ