AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿನಲ್ಲಿ ವಾಲಿದ 3 ಅಂತಸ್ತಿನ ಕಟ್ಟಡ; ಹಲವು ಕುಟುಂಬಗಳ ಸ್ಥಳಾಂತರ

ಮಂಗಳವಾರ ರಾತ್ರಿ ಸುರಿದ ಮಳೆಗೆ ಬೆಂಗಳೂರಿನ ವೃಷಭಾವತಿ ನಗರದ 3 ಅಂತಸ್ತಿನ ಕಟ್ಟಡ ಒಂದೆಡೆ ವಾಲಿದೆ. ಈ ಹಿನ್ನೆಲೆಯಲ್ಲಿ ಈ ಕಟ್ಟಡದಲ್ಲಿ ವಾಸವಾಗಿದ್ದ ಕುಟುಂಬಗಳನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ.

Bengaluru: ಬೆಂಗಳೂರಿನಲ್ಲಿ ವಾಲಿದ 3 ಅಂತಸ್ತಿನ ಕಟ್ಟಡ; ಹಲವು ಕುಟುಂಬಗಳ ಸ್ಥಳಾಂತರ
ಬೆಂಗಳೂರಿನಲ್ಲಿ ವಾಲಿದ ಕಟ್ಟಡ
TV9 Web
| Edited By: |

Updated on:Oct 13, 2021 | 3:24 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಉಕ್ಕಿ ಹರಿಯುತ್ತಿರುವ ಚರಂಡಿ, ರಾಜಕಾಲುವೆ, ರಸ್ತೆಗಳ ಹೊಂಡದಲ್ಲಿ ನಿಂತ ನೀರು, ಬೆಂಗಳೂರಿನ ಹಲವೆಡೆ ಮುರಿದು ಬಿದ್ದ ಮರಗಳನ್ನು ತೆರವು ಮಾಡಲು ಬಿಬಿಎಂಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಇದರ ನಡುವೆ ಮಳೆಯಿಂದ ಶಿಥಿಲಗೊಂಡು ಮತ್ತೊಂದು ಕಟ್ಟಡ ಕುಸಿಯುವ ಭೀತಿಯಲ್ಲಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ವೃಷಭಾವತಿ ನಗರದಲ್ಲಿ 3 ಅಂತಸ್ತಿನ ಕಟ್ಟಡವೊಂದು ಕುಸಿಯುವ ಹಂತದಲ್ಲಿದೆ.

ಮಂಗಳವಾರ ರಾತ್ರಿ ಸುರಿದ ಮಳೆಗೆ ಈ 3 ಅಂತಸ್ತಿನ ಕಟ್ಟಡ ಒಂದೆಡೆ ವಾಲಿದೆ. ಈ ಹಿನ್ನೆಲೆಯಲ್ಲಿ ಈ ಕಟ್ಟಡದಲ್ಲಿ ವಾಸವಾಗಿದ್ದ ಕುಟುಂಬಗಳನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಲ್ಲಿ ವಾಸವಾಗಿದ್ದ ಜನರಿಗೆ ಸರ್ಕಾರದಿಂದಲೇ ನೆರವು ನೀಡಲಾಗಿದೆ. ಶಿಥಿಲಗೊಂಡಿದ್ದ ಕಟ್ಟಡದಲ್ಲಿ ವಾಸವಾಗಿದ್ದ ಜನರನ್ನು ರಾತ್ರಿಯೇ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಹಾಗೇ, ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಕಪಕ್ಕದ ಮನೆಗಳ ಜನರನ್ನು ಕೂಡ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ.

ಇಂದು ಬೆಳಗ್ಗೆ ಸಚಿವ ಕೆ. ಗೋಪಾಲಯ್ಯ ವೃಷಭಾವತಿ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಅವರು ಆ ಕಟ್ಟಡದಲ್ಲಿ ವಾಸವಾಗಿದ್ದವರು ಮತ್ತು ಅಕ್ಕಪಕ್ಕದ ಮನೆಯವರಿಗೆ ವಸತಿ, ಊಟದ ವ್ಯಸ್ಥೆ ಕಲ್ಪಿಸಲು ಸೂಚಿಸಿದ್ದಾರೆ.

ಆ ಮನೆಯ ಮಾಲೀಕರು ನಾಪತ್ತೆಯಾಗಿದ್ದು, ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ. ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕಟ್ಟಡವು ವೃಷಭಾವತಿ ನಗರದಲ್ಲಿದ್ದು, ಈ ಕಟ್ಟಡದ ಅಡಿಪಾಯ ನೀರಿನಲ್ಲಿ ಮುಳುಗಿರುವುದರಿಂದ ಒಂದು ಭಾಗ ಕುಸಿದಿದೆ ಎನ್ನಲಾಗಿದೆ. ಈ ಕಟ್ಟಡದ ಪಕ್ಕದ ಜಾಗವನ್ನು ಕೂಡ ಅಗೆದಿರುವುದರಿಂದಲೂ ಈ ರೀತಿ ವಾಲಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಜಯನಗರ, ವೈಟ್​ಫೀಲ್ಡ್, ರಾಜಾಜಿನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್ ಶಾಸಕರ ಸಂಬಂಧಿ ಬ್ಯಾಗ್​ನಲ್ಲಿ 2 ಜೀವಂತ ಬುಲೆಟ್ ಪತ್ತೆ

Published On - 3:20 pm, Wed, 13 October 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್