AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ

ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ. 

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
ಕಿರಣ್​ ಸೂರ್ಯ
| Edited By: |

Updated on:Jun 02, 2024 | 8:44 PM

Share

ಬೆಂಗಳೂರು, ಜೂನ್​ 2: ರಾಜ್ಯದಲ್ಲಿ ಮುಂಗಾರು ಮಾರುತ ಪ್ರವೇಶಿಸಿರುವ ಬೆನ್ನಲ್ಲೇ ಮಳೆ (Rain) ಅಬ್ಬರ ಶುರುವಾಗಿದೆ. ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ (Namma Metro) ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಮಳೆಯಿಂದಾಗಿ ಮರದ ಕೊಂಬೆ ಬಿದ್ದ ಹಿನ್ನೆಲೆ ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ.

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದ್ದು ಸಂಚಾರ ಸಲಹೆ ನೀಡಿದ್ದಾರೆ. ವೆಬ್ ಜಂಕ್ಷನ್ ಬಳಿ ಮೆಟ್ರೋ ಟ್ರ್ಯಾಕ್ ಮೇಲೆ ದೊಡ್ಡ ಮರ ಬಿದ್ದ ಕಾರಣ ಟ್ರಿನಿಟಿ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ, ದಯವಿಟ್ಟು ಸಹಕರಿಸಿ ಎಂದು ಹೇಳಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ರಾಮಕೃಷ್ಣ ಆಶ್ರಮದ ಬಳಿ ಬೃಹತ್ ಮರ ಧರೆಗುಳಿದೆ. ಐ10 ಕಾರ್ ಮೇಲೆ ಬಿದ್ದಿದ್ದು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಳ್ಳಾರಿ ರಸ್ತೆ ಭಾಗದಲ್ಲಿ ಕೊಡಿಗೇಹಳ್ಳಿ, ಹೆಬ್ಬಾಳ ದವರೆಗೂ ಫುಲ್ ಜಾಮ್ ಆಗಿದೆ. ಗಂಟೆಗಟ್ಟಲೆ ವಾಹನ ಸವಾರರು ನಿಂತಲ್ಲೇ ನಿಂತಿದ್ದಾರೆ. ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ನಗರದಲ್ಲಿ ಇಂದು ಸುರಿದ ಮಳೆಗೆ ಹಲವೆಡೆ ಮರಗಳು ನೆಲಕಚ್ಚಿವೆ. ಕೋರಮಂಗಲ ಬಳಿ ಲೈಟ್ ಕಂಬ ಮತ್ತು ಆಟೋ ಮೇಲೆ ಮರ ಮುರಿದು ಬಿದಿದ್ದು, ಅದೃಷ್ಟವಶಾತ್ ಆಟೋ ಚಾಲಕ ಪಾರಾಗಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:38 pm, Sun, 2 June 24

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್