ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ

ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ. 

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 02, 2024 | 8:44 PM

ಬೆಂಗಳೂರು, ಜೂನ್​ 2: ರಾಜ್ಯದಲ್ಲಿ ಮುಂಗಾರು ಮಾರುತ ಪ್ರವೇಶಿಸಿರುವ ಬೆನ್ನಲ್ಲೇ ಮಳೆ (Rain) ಅಬ್ಬರ ಶುರುವಾಗಿದೆ. ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ (Namma Metro) ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಮಳೆಯಿಂದಾಗಿ ಮರದ ಕೊಂಬೆ ಬಿದ್ದ ಹಿನ್ನೆಲೆ ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ.

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದ್ದು ಸಂಚಾರ ಸಲಹೆ ನೀಡಿದ್ದಾರೆ. ವೆಬ್ ಜಂಕ್ಷನ್ ಬಳಿ ಮೆಟ್ರೋ ಟ್ರ್ಯಾಕ್ ಮೇಲೆ ದೊಡ್ಡ ಮರ ಬಿದ್ದ ಕಾರಣ ಟ್ರಿನಿಟಿ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ, ದಯವಿಟ್ಟು ಸಹಕರಿಸಿ ಎಂದು ಹೇಳಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ರಾಮಕೃಷ್ಣ ಆಶ್ರಮದ ಬಳಿ ಬೃಹತ್ ಮರ ಧರೆಗುಳಿದೆ. ಐ10 ಕಾರ್ ಮೇಲೆ ಬಿದ್ದಿದ್ದು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಳ್ಳಾರಿ ರಸ್ತೆ ಭಾಗದಲ್ಲಿ ಕೊಡಿಗೇಹಳ್ಳಿ, ಹೆಬ್ಬಾಳ ದವರೆಗೂ ಫುಲ್ ಜಾಮ್ ಆಗಿದೆ. ಗಂಟೆಗಟ್ಟಲೆ ವಾಹನ ಸವಾರರು ನಿಂತಲ್ಲೇ ನಿಂತಿದ್ದಾರೆ. ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ನಗರದಲ್ಲಿ ಇಂದು ಸುರಿದ ಮಳೆಗೆ ಹಲವೆಡೆ ಮರಗಳು ನೆಲಕಚ್ಚಿವೆ. ಕೋರಮಂಗಲ ಬಳಿ ಲೈಟ್ ಕಂಬ ಮತ್ತು ಆಟೋ ಮೇಲೆ ಮರ ಮುರಿದು ಬಿದಿದ್ದು, ಅದೃಷ್ಟವಶಾತ್ ಆಟೋ ಚಾಲಕ ಪಾರಾಗಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:38 pm, Sun, 2 June 24

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ