AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ

ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ. 

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
Kiran Surya
| Edited By: |

Updated on:Jun 02, 2024 | 8:44 PM

Share

ಬೆಂಗಳೂರು, ಜೂನ್​ 2: ರಾಜ್ಯದಲ್ಲಿ ಮುಂಗಾರು ಮಾರುತ ಪ್ರವೇಶಿಸಿರುವ ಬೆನ್ನಲ್ಲೇ ಮಳೆ (Rain) ಅಬ್ಬರ ಶುರುವಾಗಿದೆ. ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ (Namma Metro) ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಮಳೆಯಿಂದಾಗಿ ಮರದ ಕೊಂಬೆ ಬಿದ್ದ ಹಿನ್ನೆಲೆ ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ.

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದ್ದು ಸಂಚಾರ ಸಲಹೆ ನೀಡಿದ್ದಾರೆ. ವೆಬ್ ಜಂಕ್ಷನ್ ಬಳಿ ಮೆಟ್ರೋ ಟ್ರ್ಯಾಕ್ ಮೇಲೆ ದೊಡ್ಡ ಮರ ಬಿದ್ದ ಕಾರಣ ಟ್ರಿನಿಟಿ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ, ದಯವಿಟ್ಟು ಸಹಕರಿಸಿ ಎಂದು ಹೇಳಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ರಾಮಕೃಷ್ಣ ಆಶ್ರಮದ ಬಳಿ ಬೃಹತ್ ಮರ ಧರೆಗುಳಿದೆ. ಐ10 ಕಾರ್ ಮೇಲೆ ಬಿದ್ದಿದ್ದು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಳ್ಳಾರಿ ರಸ್ತೆ ಭಾಗದಲ್ಲಿ ಕೊಡಿಗೇಹಳ್ಳಿ, ಹೆಬ್ಬಾಳ ದವರೆಗೂ ಫುಲ್ ಜಾಮ್ ಆಗಿದೆ. ಗಂಟೆಗಟ್ಟಲೆ ವಾಹನ ಸವಾರರು ನಿಂತಲ್ಲೇ ನಿಂತಿದ್ದಾರೆ. ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ನಗರದಲ್ಲಿ ಇಂದು ಸುರಿದ ಮಳೆಗೆ ಹಲವೆಡೆ ಮರಗಳು ನೆಲಕಚ್ಚಿವೆ. ಕೋರಮಂಗಲ ಬಳಿ ಲೈಟ್ ಕಂಬ ಮತ್ತು ಆಟೋ ಮೇಲೆ ಮರ ಮುರಿದು ಬಿದಿದ್ದು, ಅದೃಷ್ಟವಶಾತ್ ಆಟೋ ಚಾಲಕ ಪಾರಾಗಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:38 pm, Sun, 2 June 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ