AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ

ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ. 

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Jun 02, 2024 | 8:44 PM

ಬೆಂಗಳೂರು, ಜೂನ್​ 2: ರಾಜ್ಯದಲ್ಲಿ ಮುಂಗಾರು ಮಾರುತ ಪ್ರವೇಶಿಸಿರುವ ಬೆನ್ನಲ್ಲೇ ಮಳೆ (Rain) ಅಬ್ಬರ ಶುರುವಾಗಿದೆ. ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ (Namma Metro) ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಮಳೆಯಿಂದಾಗಿ ಮರದ ಕೊಂಬೆ ಬಿದ್ದ ಹಿನ್ನೆಲೆ ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ.

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದ್ದು ಸಂಚಾರ ಸಲಹೆ ನೀಡಿದ್ದಾರೆ. ವೆಬ್ ಜಂಕ್ಷನ್ ಬಳಿ ಮೆಟ್ರೋ ಟ್ರ್ಯಾಕ್ ಮೇಲೆ ದೊಡ್ಡ ಮರ ಬಿದ್ದ ಕಾರಣ ಟ್ರಿನಿಟಿ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ, ದಯವಿಟ್ಟು ಸಹಕರಿಸಿ ಎಂದು ಹೇಳಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ರಾಮಕೃಷ್ಣ ಆಶ್ರಮದ ಬಳಿ ಬೃಹತ್ ಮರ ಧರೆಗುಳಿದೆ. ಐ10 ಕಾರ್ ಮೇಲೆ ಬಿದ್ದಿದ್ದು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಳ್ಳಾರಿ ರಸ್ತೆ ಭಾಗದಲ್ಲಿ ಕೊಡಿಗೇಹಳ್ಳಿ, ಹೆಬ್ಬಾಳ ದವರೆಗೂ ಫುಲ್ ಜಾಮ್ ಆಗಿದೆ. ಗಂಟೆಗಟ್ಟಲೆ ವಾಹನ ಸವಾರರು ನಿಂತಲ್ಲೇ ನಿಂತಿದ್ದಾರೆ. ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ನಗರದಲ್ಲಿ ಇಂದು ಸುರಿದ ಮಳೆಗೆ ಹಲವೆಡೆ ಮರಗಳು ನೆಲಕಚ್ಚಿವೆ. ಕೋರಮಂಗಲ ಬಳಿ ಲೈಟ್ ಕಂಬ ಮತ್ತು ಆಟೋ ಮೇಲೆ ಮರ ಮುರಿದು ಬಿದಿದ್ದು, ಅದೃಷ್ಟವಶಾತ್ ಆಟೋ ಚಾಲಕ ಪಾರಾಗಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:38 pm, Sun, 2 June 24

51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್