AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ

ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ. 

ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 02, 2024 | 8:44 PM

Share

ಬೆಂಗಳೂರು, ಜೂನ್​ 2: ರಾಜ್ಯದಲ್ಲಿ ಮುಂಗಾರು ಮಾರುತ ಪ್ರವೇಶಿಸಿರುವ ಬೆನ್ನಲ್ಲೇ ಮಳೆ (Rain) ಅಬ್ಬರ ಶುರುವಾಗಿದೆ. ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಗಾಳಿ ಮಳೆಯಿಂದ ಮೆಟ್ರೋ (Namma Metro) ಟ್ರ್ಯಾಕ್​ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಮಳೆಯಿಂದಾಗಿ ಮರದ ಕೊಂಬೆ ಬಿದ್ದ ಹಿನ್ನೆಲೆ ಸದ್ಯ ನೇರಳೆ ಮಾರ್ಗದಲ್ಲಿ ಬರುವ ಇಂದಿರಾನಗರದಿಂದ ವೈಟ್​ಫೀಲ್ಡ್​​, ​ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ.

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದ್ದು ಸಂಚಾರ ಸಲಹೆ ನೀಡಿದ್ದಾರೆ. ವೆಬ್ ಜಂಕ್ಷನ್ ಬಳಿ ಮೆಟ್ರೋ ಟ್ರ್ಯಾಕ್ ಮೇಲೆ ದೊಡ್ಡ ಮರ ಬಿದ್ದ ಕಾರಣ ಟ್ರಿನಿಟಿ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ, ದಯವಿಟ್ಟು ಸಹಕರಿಸಿ ಎಂದು ಹೇಳಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ರಾಮಕೃಷ್ಣ ಆಶ್ರಮದ ಬಳಿ ಬೃಹತ್ ಮರ ಧರೆಗುಳಿದೆ. ಐ10 ಕಾರ್ ಮೇಲೆ ಬಿದ್ದಿದ್ದು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಳ್ಳಾರಿ ರಸ್ತೆ ಭಾಗದಲ್ಲಿ ಕೊಡಿಗೇಹಳ್ಳಿ, ಹೆಬ್ಬಾಳ ದವರೆಗೂ ಫುಲ್ ಜಾಮ್ ಆಗಿದೆ. ಗಂಟೆಗಟ್ಟಲೆ ವಾಹನ ಸವಾರರು ನಿಂತಲ್ಲೇ ನಿಂತಿದ್ದಾರೆ. ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ನಗರದಲ್ಲಿ ಇಂದು ಸುರಿದ ಮಳೆಗೆ ಹಲವೆಡೆ ಮರಗಳು ನೆಲಕಚ್ಚಿವೆ. ಕೋರಮಂಗಲ ಬಳಿ ಲೈಟ್ ಕಂಬ ಮತ್ತು ಆಟೋ ಮೇಲೆ ಮರ ಮುರಿದು ಬಿದಿದ್ದು, ಅದೃಷ್ಟವಶಾತ್ ಆಟೋ ಚಾಲಕ ಪಾರಾಗಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:38 pm, Sun, 2 June 24

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ