AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಕೋರಮಂಗಲ, ಶಾಂತಿನಗರ ಸೇರಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆ

ಕಳೆದ ಮೂರು ದಿನಗಳಿಂದ ‌ನಿರಂತರವಾಗಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ‌ಮಳೆಯಾಗುತ್ತಿದೆ. ಇಂದು ಕೂಡ ನಗರದಲ್ಲಿ ಮಳೆ ಶುರುವಾಗಿದ್ದು, ಕೋರಮಂಗಲ, ಶಾಂತಿನಗರ, ಆಡುಗೋಡಿ, ವಿಲ್ಸನ್​ ಗಾರ್ಡನ್, ಕೆ.ಆರ್.ಮಾರ್ಕೆಟ್​, ಲಾಲ್​ಬಾಗ್​ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ.

Bengaluru Rain: ಕೋರಮಂಗಲ, ಶಾಂತಿನಗರ ಸೇರಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆ
ಕೋರಮಂಗಲ, ಶಾಂತಿನಗರ ಸೇರಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:May 13, 2024 | 11:34 PM

ಬೆಂಗಳೂರು, ಮೇ 13: ಕಳೆದ ಮೂರು ದಿನಗಳಿಂದ ‌ನಿರಂತರವಾಗಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ‌ಮಳೆಯಾಗುತ್ತಿದೆ (Rain). ಇಂದು ಕೂಡ ನಗರದಲ್ಲಿ ಮಳೆ ಶುರುವಾಗಿದ್ದು, ಕೋರಮಂಗಲ, ಶಾಂತಿನಗರ, ಆಡುಗೋಡಿ, ವಿಲ್ಸನ್​ ಗಾರ್ಡನ್, ಕೆ.ಆರ್.ಮಾರ್ಕೆಟ್​, ಲಾಲ್​ಬಾಗ್​, ಕಾರ್ಪೊರೇಷನ್, ಮೈಸೂರು ರಸ್ತೆ ,ಟೌನ್ ಹಾಲ್, ಮೆಜೆಸ್ಟಿಕ್​, ಜೆ.ಸಿ.ರೋಡ್​ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ. ನಿನ್ನೆ ತಡರಾತ್ರಿಯೂ ಜೋರು ಮಳೆ ಆಗಿತ್ತು.

ಗುಡುಗು ಸಹಿತ ಭಾರಿ ಮಳೆ: ಹಾರಿ ಹೋದ ಮನೆಗಳ ಮೇಲ್ಛಾವಣಿ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಾದ್ಯಂತ ಗುಡುಗು ಸಹಿತ ಭಾರಿ ಮಳೆ ಆರಂಭವಾಗಿದೆ. ಗಾಳಿ ಮಳೆಗೆ ಹತ್ತಕ್ಕೂ ಅಧಿಕ ಮನೆಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಕುಟುಂಬಗಳು ಬೀದಿಗೆ ಬಂದಿವೆ.  ತಗಡಿನ ಶೆಡ್​ಗಳ ಮೇಲಿನ ಸೀಟ್ ಹಾರಿ ಹೋಗಿ ಅನಾಹುತ ಸಂಭವಿಸಿದೆ.

ಇದನ್ನೂ ಓದಿ: Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ

ಐದಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಎರಡು ಬೈಕ್​ಗಳು ಜಖಂಗೊಂಡಿವೆ. ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಗಾಳಿ ಮಳೆಯಿಂದ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಮರ

ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್​ ಬಳಿ ಗಾಳಿ ಮಳೆಯಿಂದ ಚಲಿಸುತ್ತಿದ್ದ ರೈಲಿನ ಮೇಲೆ ಮರ ಬಿದ್ದಿದೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಿಶ್ವಮಾನವ ರೈಲಿನ ಮೇಲೆ ಮರ ಬಿದ್ದು ರೈಲು ಮುಂಭಾಗದ ಗ್ಲಾಸ್ ಪುಡಿ ಪುಡಿ ಆಗಿದೆ. ಘಟನೆಯಲ್ಲಿ ಲೋಕೋ ಪೈಲಟ್​ಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯ ಲೆಕ್ಕಿಸದೇ ರೈಲ್ವೆ ನಿಲ್ದಾಣದವರೆಗೂ ಲೋಕೋ ಪೈಲಟ್ ರೈಲು ತಲುಪಿಸಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನ ವಿಜಯನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಆರಂಭ

ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಹಲವಡೆ ಕಳೆದ ರಾತ್ರಿ ಮಿಂಚು, ಗುಡುಗ ಸಹಿತ ಬಾರಿ ಮಳೆಯಾಗಿತ್ತು. ಕಳೆದ ಕೆಲ ದಿನಗಳಿಂದ ಕೊಪ್ಪಳ ಜಿಲ್ಲೆ ಬಿಸಿಲಿನಿಂದ ಕಾದ ಹಂಚಿನಂತಾಗಿತ್ತು. ಆದರೆ ಕಳೆದ ರಾತ್ರಿ ಸುರಿದ ಮಳೆಗೆ ಕೊಪ್ಪಳ ಇದೀಗ ಕೂಲ್ ಕೂಲ್ ಆಗಿತ್ತು. ಇನ್ನು ರಾತ್ರಿ ಸುರಿದ ಮಳೆಯಿಂದ ಕೆಲವಡೇ ಅಸ್ತವ್ಯಸ್ಥ ಸ್ಥಿತಿ ಕೂಡಾ ನಿರ್ಮಾಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:23 pm, Mon, 13 May 24

Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್