AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ

Karnataka Weather Report: ಇಂದು ಬೆಳಿಗ್ಗೆಯೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹೊತ್ತಿಗೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ನಾಳೆಯೂ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

Bangalore Rain: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ
ಮಳೆ (ಸಂಗ್ರಹ ಚಿತ್ರ)
Follow us
preethi shettigar
|

Updated on:May 04, 2021 | 5:16 PM

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ ಗಾಳಿ ಸಹಿತ ಮಳೆ ಪ್ರಾರಂಭವಾಗಿದ್ದು, ಇನ್ನು ಸ್ವಲ್ಪ ಕಾಲ ಮಳೆ ಹೀಗೆ ಬೀಳುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ವಾತವರಣ ಸೃಷ್ಟಿಯಾಗಿತ್ತು. ಆದರೆ ಮಳೆಯಾಗಿರಲಿಲ್ಲ. ಇಂದು ಹವಮಾನ ವರದಿಯಂತೆ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ತಂಪಾದ ವಾತವರಣ ಸೃಷ್ಟಿಯಾಗಿದೆ.

ಇಂದು ಬೆಳಿಗ್ಗೆಯೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹೊತ್ತಿಗೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ನಾಳೆಯೂ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

ನಗರದಲ್ಲಿ ಇಂದು ಬೆಳಿಗ್ಗೆ ಸುಮಾರು 32 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿತ್ತು. ಆದರೆ ಮಧ್ಯಾಹ್ನವಾಗುತ್ತಿದ್ದಂತೆ ಮೋಡ ಕವಿಯಲು ಶುರುವಾಗಿದ್ದು, ಅದೀಗ 23 ಡಿಗ್ರಿ ಸೆಲ್ಸಿಯಸ್​ ರಷ್ಟಾಗಿದೆ. ಮಳೆ ರಾತ್ರಿವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ತೀರ ಪ್ರದೇಶದ ಪ್ರಭಾವದಿಂದ ಕೇರಳ, ಮಾಹೆ ಮತ್ತು ಕರ್ನಾಟಕದಲ್ಲಿ ಗಾಳಿ ಸಹಿತ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ಕಾಲ ಭಾರತದ ದಕ್ಷಿಣ ಪರ್ಯಾಯ ದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಟ್ವೀಟ್ ಮಾಡಿದೆ.

ಮೇ 4 ರಿಂದ 6 ವರೆಗೆ ಕೇರಳ ಮತ್ತು ಮಾಹೆ ಪ್ರದೇಶದಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮೇ 5 ಮತ್ತು 6ಕ್ಕೆ ಕರಾವಳಿ ಮತ್ತು ದಕ್ಷಿಣ ಒಳ ಕರ್ನಾಟಕ ಪ್ರದೇಶದಲ್ಲಿ ಕೂಡ ಮಳೆ ಮುಂದುವರಿಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಟ್ವೀಟ್ ಮೂಲಕ ತಿಳಿಸಿದೆ.

Karnataka Weather ಮೇ 6ರ ವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆ

Bengaluru Rain: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ಮಳೆ ಪ್ರಾರಂಭ; ರಾಜ್ಯದ ಹಲವೆಡೆ ವರುಣ ಸಿಂಚನದ ಸಾಧ್ಯತೆ

Published On - 4:34 pm, Tue, 4 May 21

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್