AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ

Karnataka Weather Report: ಇಂದು ಬೆಳಿಗ್ಗೆಯೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹೊತ್ತಿಗೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ನಾಳೆಯೂ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

Bangalore Rain: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ
ಮಳೆ (ಸಂಗ್ರಹ ಚಿತ್ರ)
preethi shettigar
|

Updated on:May 04, 2021 | 5:16 PM

Share

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ ಗಾಳಿ ಸಹಿತ ಮಳೆ ಪ್ರಾರಂಭವಾಗಿದ್ದು, ಇನ್ನು ಸ್ವಲ್ಪ ಕಾಲ ಮಳೆ ಹೀಗೆ ಬೀಳುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ವಾತವರಣ ಸೃಷ್ಟಿಯಾಗಿತ್ತು. ಆದರೆ ಮಳೆಯಾಗಿರಲಿಲ್ಲ. ಇಂದು ಹವಮಾನ ವರದಿಯಂತೆ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ತಂಪಾದ ವಾತವರಣ ಸೃಷ್ಟಿಯಾಗಿದೆ.

ಇಂದು ಬೆಳಿಗ್ಗೆಯೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹೊತ್ತಿಗೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ನಾಳೆಯೂ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

ನಗರದಲ್ಲಿ ಇಂದು ಬೆಳಿಗ್ಗೆ ಸುಮಾರು 32 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿತ್ತು. ಆದರೆ ಮಧ್ಯಾಹ್ನವಾಗುತ್ತಿದ್ದಂತೆ ಮೋಡ ಕವಿಯಲು ಶುರುವಾಗಿದ್ದು, ಅದೀಗ 23 ಡಿಗ್ರಿ ಸೆಲ್ಸಿಯಸ್​ ರಷ್ಟಾಗಿದೆ. ಮಳೆ ರಾತ್ರಿವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ತೀರ ಪ್ರದೇಶದ ಪ್ರಭಾವದಿಂದ ಕೇರಳ, ಮಾಹೆ ಮತ್ತು ಕರ್ನಾಟಕದಲ್ಲಿ ಗಾಳಿ ಸಹಿತ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ಕಾಲ ಭಾರತದ ದಕ್ಷಿಣ ಪರ್ಯಾಯ ದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಟ್ವೀಟ್ ಮಾಡಿದೆ.

ಮೇ 4 ರಿಂದ 6 ವರೆಗೆ ಕೇರಳ ಮತ್ತು ಮಾಹೆ ಪ್ರದೇಶದಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮೇ 5 ಮತ್ತು 6ಕ್ಕೆ ಕರಾವಳಿ ಮತ್ತು ದಕ್ಷಿಣ ಒಳ ಕರ್ನಾಟಕ ಪ್ರದೇಶದಲ್ಲಿ ಕೂಡ ಮಳೆ ಮುಂದುವರಿಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಟ್ವೀಟ್ ಮೂಲಕ ತಿಳಿಸಿದೆ.

Karnataka Weather ಮೇ 6ರ ವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆ

Bengaluru Rain: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ಮಳೆ ಪ್ರಾರಂಭ; ರಾಜ್ಯದ ಹಲವೆಡೆ ವರುಣ ಸಿಂಚನದ ಸಾಧ್ಯತೆ

Published On - 4:34 pm, Tue, 4 May 21

Follow Us
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ