AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ

Bangalore Rains, Weather Report: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತು ಬೆಂಗಳೂರಿನ ಕೆಲವೆಡೆ ಹಗುರ ಮಳೆ ಸಾಧ್ಯತೆ ಇದ್ದು, ಜೊತೆಗೆ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

Bengaluru Rain: ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
Vinayak Hanamant Gurav
Vinayak Hanamant Gurav| Edited By: |

Updated on:May 06, 2024 | 6:13 PM

Share

ಬೆಂಗಳೂರು, ಮೇ 06: ಕಳೆದ ಕೆಲ ದಿನಗಳ ಹಿಂದೆ ವರ್ಷದ ಮೊದಲ ಮಳೆ ಸಿಲಿಕಾನ್ ಸಿಟಿಯಲ್ಲಿ  ಆರ್ಭಟಿಸುವ ಮೂಲಕ ತಂಪೆರೆದಿದ್ದ. ಹೀಗಾಗಿ ಜನರಿಗೆ ಮಳೆರಾಯ (Bengaluru Rain) ಹರ್ಷ ತಂದಿದ್ದ. ಇದೀಗ ಮತ್ತೊಂದು ಗುಡ್​ನ್ಯೂಸ್​ ಬಂದಿದೆ. ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological Department) ನೀಡಿದೆ. ಇವತ್ತು ಬೆಂಗಳೂರಿನ ಕೆಲವೆಡೆ ಹಗುರ ಮಳೆ ಸಾಧ್ಯತೆ ಇದ್ದು, ಜೊತೆಗೆ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಮಳೆ ಮುನ್ಸೂಚನೆ ಇದೆ.

IMD ಪ್ರಕಾರ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 24.0 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 38.0 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಲಘು ಮಳೆಯಾಗುವ ಸಾಧ್ಯತೆ ಇದೆ. ಮೇ 7 ರಂದು ಕೂಡ ಬೆಂಗಳೂರಲ್ಲಿ ಮಳೆ ಹೆಚ್ಚಳವಾಗುವ ಸಂಭವವಿದೆ.

ಇದನ್ನೂ ಓದಿ: Rain Alert: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು ಹೊರೆತುಪಡಿಸಿ 8 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಮೇತ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ಮೈಸೂರು, ಹುಣಸೂರು, ಕೊಡಗು, ಕೆ.ಆರ್​ ನಗರ, ಹಾಸನ, ಮಂಡ್ಯ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain Updates: ಕರ್ನಾಟಕದ ಹಲವೆಡೆ ಭಾರೀ ಮಳೆ: ಸಿಡಿಲಿಗೆ ಹೊತ್ತಿ ಉರಿದ ಪ್ರವಾಸಿತಾಣದ ಗಿರಿಜನ ಮನೆ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಾಮುತ್ತಾ ಈಗಾಗಲೇ ತುಂತುರು ಮಳೆ ಶುರುವಾಗಿದೆ. ತುಂತುರು ‌ಮಳೆಯಿಂದ ಕೆಂಪೇಗೌಡ ಏರ್ಪೋರ್ಟ್ ವಾತಾವರಣ ತಂಪಾಗಿದೆ. ಸುಡು ಬಿಸಿಲಿಂದ ಕೆಂಗೆಟ್ಟಿದ್ದ ಏರ್ಪೋಟ್ ಪ್ರಯಾಣಿಕರಿಗೆ ಮಳೆರಾಯ ತಂಪೆರೆದಿದ್ದಾನೆ. ಮಳೆ ಬರುತ್ತಿದ್ದಂತೆ ಮೊಬೈಲ್​ನಲ್ಲಿ ಮಳೆಹನಿಗಳ ಸೆರೆ ಹಿಡಿಯುವಲ್ಲಿ ಪ್ರಯಾಣಿಕರು ಬಿಜಿಯಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ಸುತ್ತಮುತ್ತ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಚಂದಾಪುರ ಜಿಗಣಿ ಸುತ್ತಮುತ್ತ ಮಳೆ ಆಗಿದ್ದು, ಬಿಸಿಲ ಬೇಗೆಗೆ ಕೆಂಡವಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಕೆಲವು ಕಡೆ ಬಿರುಗಾಳಿ ಸಹಿತ ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ, ಭಾಗದಲ್ಲಿ ಆಲಿಕಲ್ಲು ಮಳೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:38 pm, Mon, 6 May 24

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್