Bangaluru Rain: ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮೂನ್ಸುಚನೆ

ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಇಂದಿನಿಂದ ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು, ಅಲರ್ಟ್‌ ಘೋಷಿಸಲಾಗಿದೆ.

Bangaluru Rain: ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮೂನ್ಸುಚನೆ
ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮೂನ್ಸುಚನೆ
Follow us
|

Updated on:Jun 08, 2024 | 11:01 PM

ಬೆಂಗಳೂರು, ಜೂನ್​ 08: ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆ (Rain) ಯಾಗಿದೆ. ಇದರ ಪರಿಣಾಮವಾಗಿ ಜೂನ್​ 11ರವರೆಗೆ ಗುಡುಗು, ಮಿಂಚು ಸಹಿತ ರಾಜ್ಯದಲ್ಲಿ ಮಳೆಯಾಗಲಿದೆ. ಜೊತೆಗೆ ಬೆಂಗಳೂರಿನಲ್ಲಿ (Bangaluru) ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ಈ ಕುರಿತಾಗಿ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್​ ಪ್ರತಿಕ್ರಿಯಿಸಿದ್ದು, ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಎಲ್ಲೆಲ್ಲಿ ಎಷ್ಟೇಷ್ಟು ಮಳೆ 

ಉತ್ತರ ಕನ್ನಡ ಜಿಲ್ಲೆಯಲ್ಲಿ 23 ಸೆಂ.ಮೀ, ಕಾರವಾರ 22 ಸೆಂ.ಮೀ, ಗೋಕರ್ಣ 20 ಸೆಂ. ಮೀ, ಕುಮಟಾ 20 ಸೆಂ.ಮೀ ಮಳೆಯಾಗಿದೆ. ಉತ್ತರ ಕರ್ನಾಟಕದಲ್ಲಿ 3.1 ರಿಂದ 7.6 ಕಿ.ಮೀ ಎತ್ತರದಲ್ಲಿ ಸುಳಿಗಾಳಿ ಇದ್ದು, ದಿನಾಂಕ 11ರವರೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: Karnataka Rain: ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಉತ್ತರ ಕನ್ನಡ, ದಕ್ಷಿಣ ಕನ್ನಡ, ಕಲಬುರಗಿ, ಉಡುಪಿಯಲ್ಲಿ ಅತ್ಯಂತ ಭಾರಿ ಮಳೆ ಸಾಧ್ಯತೆ ಇದ್ದು, ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಇಂದಿನಿಂದ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಿಜಯಪುರದಲ್ಲಿ ಮುಂದುವರೆದ ಮಳೆಯ ಅಬ್ಬರ

ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮೊನ್ನೆ ದಾಖಲೆ ಪ್ರಮಾಣದಲ್ಲಿ ಒಂದೇ ದಿನ 72.8 ಮಿಲಿ ಮೀಟರ್ ಮಳೆಯಾಗಿತ್ತು. ಜೊತೆಗೆ ಹತ್ತಾರು ಆವಾಂತರಗಳು ನಡೆದಿದ್ದವು. ತೆಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಜನರು ಪಡಬಾರದ ಯಾತನೆ ಪಟ್ಟಿದ್ದರು. ನಿನ್ನೆ ಒಂದು ದಿನ ವಿಶ್ರಾಂತಿ ಪಡೆದಿದ್ದ ಮಳೆ ಇಂದು ಮಧ್ಯಾಹ್ನ ಪ್ರತ್ಯಕ್ಷವಾಗಿತ್ತು. ಸತತ ಅರ್ಧ ಗಂಟೆಗೂ ಆಧಿಕ ಕಾಲ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ

ನಗರದ ಬಸವನಬಾಗೇವಾಡಿ ತಾಲೂಕು, ವಿಜಯಪುರ ತಾಲೂಕು ತಾಳಿಕೋಟೆ ತಾಲೂಕು ಮುದ್ದೇಬಿಹಾಳ ತಾಲೂಕಿನಲ್ಲಿ ಉತ್ತಮ ವರ್ಷಧಾರೆಯಾಗಿದೆ. ರಸ್ತೆಗಳೆಲ್ಲಾ ಜಲಾವೃತವಾಗಿದ್ದು ವಾಹನ ಸವಾರರು ಸುರಿವ ಮಳೆಯಲ್ಲೇ ಸಂಚಾರ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಆಗಿದೆ. ಕಳೆದ ಅರ್ಧ ಗಂಟೆಯಿಂದ ನಿರಂತರ ಮಳೆ ಸುರಿದಿದೆ. ಧಾರಾಕಾರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರ ಪರದಾಡಿದ್ದಾರೆ.  ಹುಬ್ಬಳ್ಳಿಯಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಪುನಾರಂಭವಾಗಿದೆ. ಹೀಗಾಗಿ ವಾಣಿಜ್ಯ ನಗರಿ ಹುಬ್ಬಳ್ಳಿ ಮಲೆನಾಡಿನಂತಾಗಿದೆ.

ವರದಿ: ಮುತ್ತು

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:45 pm, Sat, 8 June 24

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ