AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain Today: ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ

Bangalore Rains Weather Forecast Today: ಬಿರು ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಇದೀಗ ನಗರದ ಹಲವು ಏರಿಯಾಗಳಲ್ಲಿ ಮಳೆ ಶುರುವಾಗಿದ್ದು, ಇನ್ನು ಕೆಲವೆಡೆ ಭಾರೀ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಿಡಿಲು ಜೋರಾಗಿದೆ.

Bengaluru Rain Today: ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ
ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ
ನವೀನ್ ಕುಮಾರ್ ಟಿ
| Edited By: |

Updated on:May 03, 2024 | 3:08 PM

Share

ಬೆಂಗಳೂರು, ಮೇ 03: ಬಿಸಿ ತಾಪಮಾನದಿಂದ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಜನರಿಗೆ ನಿನ್ನೆ ಮಳೆರಾಯನ ಸಿಂಚನವಾಗಿದೆ. ಆ ಮೂಲಕ ಸಿಟಿ ಜನರು ಮೊದಲ ಮಳೆಯನ್ನು ಸಂಭ್ರಮಿಸಿದ್ದಾರೆ. ನಗರದ ಹಲವೆಡೆ ನಿನ್ನೆ ಜೋರು ಮಳೆ (Rain) ಆಗಿತ್ತು. ಇಂದು ಕೂಡ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಇದೀಗ ಗುಡುಗು, ಮಿಂಚಿ ಸಹಿತ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ಸೇರಿದಂತೆ ಕೆ.ಆರ್‌ಪುರಂ ವೈಟ್ ಫಿಲ್ಡ್, ಬೆಂಗಳೂರು ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆ ಸುರಿಯುತ್ತಿದೆ.

ಬಿರು ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಇದೀಗ ನಗರದ ಹಲವು ಏರಿಯಾಗಳಲ್ಲಿ ಮಳೆ ಶುರುವಾಗಿದ್ದು, ಇನ್ನು ಕೆಲವೆಡೆ ಭಾರೀ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಿಡಿಲು ಜೋರಾಗಿದೆ. ಕಪ್ಪು ಮೋಡ ನೋಡುತ್ತಿದ್ದರೆ ಯಾವುದೇ ಸಂದರ್ಭದಲ್ಲೂ ಭಾರೀ ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಇದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು.

ಇದನ್ನೂ ಓದಿ: Bangalore Rains Today: ಬೆಂಗಳೂರಿನಲ್ಲಿ ಇಂದು ಮಳೆಯಾಗುತ್ತಾ? ಹವಾಮಾನ ಮುನ್ಸೂಚನೆ ಇಲ್ಲಿದೆ

ನಿನ್ನೆ ಹಾಗೂ ಇಂದು ನಗರದಲ್ಲಿ ಗರಿಷ್ಠ 38 ಉಷ್ಣಾಂಶ ದಾಖಲಾಗಿದೆ. ಬೆಳಿಗ್ಗೆಯಿಂದ ಬಿಸಿ ಹಾಗೂ ಆರ್ದ್ರ ವಾತಾವರಣವಿತ್ತು. ಇದೀಗ ಬಿಸಿಲಿನ ಬೇಗೆಯಿಂದ ಬೇಸತ್ತ ಸಿಟಿ ಮಂದಿಗೆ ವರುಣ ತಂಪೆರೆದಿದ್ದಾನೆ. ಮಳೆ ಹಿನ್ನಲೆ ಹಾಟ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಮಳೆ ಹಿನ್ನಲೆ ಉಷ್ಣಾಂಶದಲ್ಲಿ ಇಳಿಕೆ ಆಗಿದೆ.

ಇದನ್ನೂ ಓದಿ: ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿಗೆ ಕೊನೆಗೂ ತಂಪೆರೆದ ಮಳೆರಾಯ

ಮಳೆ ಹಿನ್ನಲೆ ಪ್ಯಾಲೇಸ್ ರಸ್ತೆ ಅಂಡರ್ ಪಾಸ್​​ಗಳಲ್ಲಿ ಜನರು ಆಸರೆ ಪಡೆದುಕೊಂಡಿದ್ದಾರೆ. ಅಂಡರ್ ಪಾಸ್ ಗಳಲ್ಲಿ ವಾಹನಗಳು ನಿಂತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ವಸಂತನಗರ ಸುತ್ತಮುತ್ತ ಕೂಡ ಜೋರು ಮಳೆ ಆಗುತ್ತಿದ್ದು, ನಿನ್ನೆಗಿಂತ ಇಂದು ಜೋರಾಗಿದೆ. ಜಯನಗರ, ಬಸವನಗುಡಿ, ಸೌತ್ ಎಂಡ್ ಸರ್ಕಲ್ ಬಳಿಯೂ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.

ಏಪ್ರಿಲ್ ತಿಂಗಳಲ್ಲಿ ಬಾರದ ಮಳೆ

ಏಪ್ರಿಲ್​ ತಿಂಗಳಲ್ಲಿ 62 ಮೀ ಮೀ ಮಳೆ ಆಗಬೇಕಿತ್ತು. ಆದರೆ ಶೂನ್ಯ ಮಳೆ ದಾಖಲಾಗಿದೆ. 4 ದಶಕಗಳಲ್ಲಿ ಬೆಂಗಳೂರಿನಲ್ಲಿ ಏಪ್ರಿಲ್​​ ತಿಂಗಳಲ್ಲಿ ಶೂನ್ಯ ಮಳೆ ಆಗಿದೆ. ಮೇ ತಿಂಗಳ ಮೊದಲ ವಾರದಲ್ಲೇ ವರುಣನ ಅಬ್ಬರ ಶುರುವಾಗಿದೆ. ಕಳೆದ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಹಗುರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿತ್ತು. ಆದರೆ ಹವಾಮಾನ ಇಲಾಖೆ ನಿರೀಕ್ಷೆಗೂ ಮೀರಿ ನಗರದಲ್ಲಿ ಮಳೆ ಸುರಿಯುತ್ತಿದೆ. ಮೇ 6 ಹಾಗೂ 7 ರಂದು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:38 pm, Fri, 3 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್