AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ವಾಹನ ಸವಾರರು ಹೈರಾಣು, ಎಲ್ಲೆಡೆ ಟ್ರಾಫಿಕ್ ಜಾಮ್

ಸತತ ಕೆಲದಿನಗಳಿಂದ ಮಟ ಮಟ ಮಧ್ಯಾಹ್ನವೇ ಬೆಂಗಳೂರಿಗೆ ಎಂಟ್ರಿ ಕೊಡುತ್ತಿರುವ ಮಳೆರಾಯ ಇಂದು ಸಹ ದಿಢೀರ್ ಎಂಟ್ರಿ ನೀಡಿದ್ದ. ಶಾಂತಿನಗರ, ಮಡಿವಾಳ, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಯಶವಂತಪುರ, ಮಲ್ಲಸಂದ್ರ ಸೇರಿ ಹಲವೆಡೆ ಭಾರೀ ಮಳೆ ಆಗಿದೆ. ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಉಂಟಾಗಿದ್ದು ಸವಾರರು ಪರದಾಡಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ವಾಹನ ಸವಾರರು ಹೈರಾಣು, ಎಲ್ಲೆಡೆ ಟ್ರಾಫಿಕ್ ಜಾಮ್
ಬೆಂಗಳೂರಿನಲ್ಲಿ ಧಾರಾಕಾರ ಮಳೆ: ವಾಹನ ಸವಾರರು ಹೈರಾಣು, ಎಲ್ಲೆಡೆ ಟ್ರಾಫಿಕ್ ಜಾಮ್
Vinayak Hanamant Gurav
| Edited By: |

Updated on:Jun 21, 2024 | 4:53 PM

Share

ಬೆಂಗಳೂರು, ಜೂನ್​ 21: ಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ಹೀಗಾಗಿ ನಗರದಲ್ಲಿ ಕೆಲ ದಿನಗಳಿಂದ ಮಟ ಮಟ ಮಧ್ಯಾಹ್ನವೇ ಜೋರು ಮಳೆ (Rain) ಆಗುತ್ತಿದೆ. ಅದೇ ರೀತಿಯಾಗಿ ಇಂದು ಕೂಡ ನಗರದ ಹಲವೆಡೆ ಭಾರೀ ಮಳೆ ಆಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಶಾಂತಿನಗರ, ಮಡಿವಾಳ, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಯಶವಂತಪುರ, ಮಲ್ಲಸಂದ್ರ ಸೇರಿ ಹಲವೆಡೆ ಭಾರೀ ಮಳೆ ಆಗಿದೆ. ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಉಂಟಾಗಿದ್ದು ಸವಾರರು ಪರದಾಡಿದ್ದಾರೆ.

ಕೇರಳ ಮತ್ತು ಕರ್ನಾಟಕ ಕರಾವಳಿ ಭಾಗದಲ್ಲಿ ಸುಳಿಗಾಳಿ ಮುಂದುವರೆದ ಹಿನ್ನಲೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಕರ್ನಾಟಕ ಒಳನಾಡಿನ ಹಾಗೂ ಪಕ್ಕದ ಜಿಲ್ಲೆಗಳಿಗೆ ತೀವ್ರತೆಯೊಂದಿಗೆ ಭಾರೀ ಮಳೆ ಸಾಧ್ಯತೆ ಇದೆ. ಇವತ್ತಿನಿಂದ ಜೂನ್​ 25ರವರೆಗೆ ಗಾಳಿ ಸಹಿತ ಭಾರೀ ಮಳೆಯೊಂದಿಗೆ ಭೂ ಕುಸಿತ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮೂನ್ಸುಚನೆ ನೀಡಿದೆ.

ಇದನ್ನೂ ಓದಿ: Bengaluru Rains: ಸಿಲಿಕಾನ್​ ಸಿಟಿಗೆ ದಿಢೀರ್ ಎಂಟ್ರಿ ಕೊಟ್ಟ ವರುಣ: ರಿಚ್​ಮಂಡ್​ ಟೌನ್​ ಸೇರಿ ಕೆಲವೆಡೆ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ 40-50 ಕಿ.ಮೀ ಭಾರೀ ಗಾಳಿಯೊಂದಿಗೆ ಮಳೆ ಆಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂನೆ: ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ

ಬಾಗಲಕೋಟೆಯಲ್ಲಿ ನಾಲ್ಕು ದಿನ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಸತತ ಅರ್ಧ ಗಂಟೆ ಧಾರಾಕಾರ ಮಳೆ ಸುರಿದಿದೆ. ನಿರಂತರ ಮಳೆ ಹಿನ್ನೆಲೆ ಜನರು ಮನೆ ಬಿಟ್ಟು ಹೊರಬಾರದ ಸ್ಥಿತಿ ನಿರ್ಮಾಣವಾಗಿತ್ತು. ನಿರಂತರ ‌ಮೋಡ ಕವಿದ ವಾತಾವರಣ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:36 pm, Fri, 21 June 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್