AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ: ಹಲವೆಡೆ ನಿಧಾನಗತಿಯ ಸಂಚಾರ

ನಿನ್ನೆ(ಅ.3) ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳೆಲ್ಲವೂ ಮಳೆ ನೀರಿನಿಂದ ತುಂಬಿಹೋಗಿವೆ. ಮೈಸೂರು ರಸ್ತೆ, ಗುಡ್ಡದಹಳ್ಳಿ ಜಂಕ್ಷನ್, ಕೆಂಗೇರಿ ಸೇರಿದಂತೆ ಹಲವು ಕಡೆ ರಸ್ತೆಗಳು ಜಲಾವೃತವಾಗಿದ್ದು, ಸಂಚಾರ ದಟ್ಟಣೆ ಇರಲಿದೆ. ಅದರೊಂದಿಗೆ ನಿಧಾನಗತಿಯ ಸಂಚಾರವೂ ಇರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ: ಹಲವೆಡೆ ನಿಧಾನಗತಿಯ ಸಂಚಾರ
ಕಳೆದ ರಾತ್ರಿ ಬೆಂಗಳೂರಿನಲ್ಲಿ ಭಾರಿ ಮಳೆ
ಭಾವನಾ ಹೆಗಡೆ
|

Updated on: Oct 04, 2025 | 8:51 AM

Share

ಬೆಂಗಳೂರು, ಅಕ್ಟೋಬರ್ 4:  ಕಳೆದ ರಾತ್ರಿ ಬೆಂಗಳೂರಿನಾದ್ಯಂತ (Bengaluru)  ಭಾರಿ ಮಳೆಯಾಗಿದ್ದು, ಹಲವೆಡೆ ನೀರು ನಿಂತಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ. ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಸಾಗರ್ ಜಂಕ್ಷನ್, ಡೈರಿ ಸಿಗ್ನಲ್ ರಾಯಸಂದ್ರ ಇನ್ನಿತರೆ ರಸ್ತೆಗಳು ಜಲಾವೃತವಾಗಿದ್ದು, ನಿಧಾನ ಗತಿಯ ಸಂಚಾರವಿರಲಿದೆಯೆಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಎಲ್ಲೆಲ್ಲಿ ರಸ್ತೆಗಳು ಜಲಾವೃತ?

ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಗೆ ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಇದರಿಂದಾಗಿ ವಾಹನ ಸಂಚಾಲಕರು ತೀವ್ರ ಕಷ್ಟಕ್ಕೊಳಗಾಗಿದ್ದಾರೆ. ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆಯಿಲ್ಲದ ಕಾರಣ ರಸ್ತೆಯಲ್ಲಿ ನೀರು ನಿಂತಿದೆ. ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.

ಬೆಂಗಳೂರು ಸಂಚಾರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಮೈಸೂರು ರಸ್ತೆ, ಗುಡ್ಡದಹಳ್ಳಿ ಜಂಕ್ಷನ್, ಕೆಂಗೇರಿ, ಬಿಳೇಕಲ್ಲಳ್ಳಿ ಸಿಗ್ನಲ್, ಜಿ.ಡಿ. ಮರ ಸಿಗ್ನಲ್, ಸಾಗರ್ ಜಂಕ್ಷನ್, ಡೈರಿ ಸಿಗ್ನಲ್, ದೊಡ್ಡ ಮರ, ಚೊಕ್ಕಸಂದ್ರ, ರಾಯಸಂದ್ರದಲ್ಲಿ ಅಲ್ಲಲ್ಲಿ ಮಳೆ ನೀರು ನಿಂತಿದೆ. ರಸ್ತೆಗಳು ಜಲಾವೃತವಾಗಿರುವ ಕಾರಣ ಈ ಎಲ್ಲಾ ಪ್ರದೇಶಗಳಲ್ಲಿ ನಿಧಾನ ಗತಿಯ ಸಂಚಾರವಿರುತ್ತದೆ. ಈ ಹಿನ್ನೆಲೆ ಸಂಚಾರ ದಟ್ಟಣೆಯೂ ಇರುತ್ತದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರ ಪೋಸ್ಟ್ ಇಲ್ಲಿದೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ