AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ

ಬೆಂಗಳೂರು ಮಹಾನಗರದಾದ್ಯಂತ ಜೋರು ಮಳೆಯಾಗಿದೆ. ಮೊದಲ ಶ್ರಾವಣ ಸೋಮವಾರದಂದು ಬೆಂಗಳೂರಿಗರಿಗೆ ಮಳೆರಾಯ ಶಾಕ್​ ನೀಡಿದ್ದಾನೆ. ರಾತ್ರಿ ಸುರಿದ ಎರಡನೇ ಸುತ್ತಿನ ನಿರಂತರ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ರಸ್ತೆಗಳಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದೆ.

ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
Vinayak Hanamant Gurav
| Edited By: |

Updated on:Aug 05, 2024 | 10:15 PM

Share

ಬೆಂಗಳೂರು, ಆಗಸ್ಟ್​ 05: ಇಂದು(ಆಗಸ್ಟ್​ 05) ಮೊದಲ ಶ್ರಾವಣ ಸೋಮವಾರದಂದು ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, (rain) ಇದೀಗ ರಾತ್ರಿ ಎರಡನೇ ಸುತ್ತಿನ ಮಳೆ ಜೋರಾಗಿದೆ. ಸಂಜೆಗಿಂತ ರಾತ್ರಿ ಮಳೆಯಾರ್ಭಟ ಜೋರಾಗಿದೆ. ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಿಲಿಕಾನ್​ ಸಿಟಿ ಮಂದಿ ಬೆಚ್ಚಿಬಿದ್ದಿದ್ದು, ಎಲ್ಲೆಡೆ ನೀರು ತುಂಬಿಕೊಂಡು ವಾಹನ ಸವಾರರು ಟ್ರಾಫಿಕ್​ನಿಂದ ಪರದಾಡುವಂತಾಗಿದೆ.

ರಾತ್ರಿ ವೇಳೆ ಬಂದ ಭಾರೀ ಧಾರಾಕಾರ ಮಳೆಗೆ ನಗರದ ರಸ್ತೆಗಳಲ್ಲಿ ಮಿನಿ ಕೆರೆಗಳು ನಿರ್ಮಾಣವಾಗಿವೆ. ವಾಹನ ಸವಾರರು ಮಳೆಗೆ ಹೈರಾಣಾಗಿದ್ದಾರೆ. ಬೆಂಗಳೂರಿನ ಕೆಂಗೇರಿ, ರಾಜರಾಜೇಶ್ವರಿನಗರ, ಈಜಿಪುರ, ಶಾಂತಿನಗರ, ವಿಜಯನಗರ, ಜಯನಗರ, ಕೆ.ಆರ್.ಮಾರ್ಕೆಟ್, ಬನಶಂಕರಿ, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ವೃತ್ತ, ವಿಧಾನಸೌಧದ ಸುತ್ತಮುತ್ತ ಭಾರೀ ವರ್ಷಧಾರೆ ಸುರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲೂ ಮಳೆ ಸುರಿಯುತ್ತಿದ್ದು, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ, ಸುಬ್ರಹ್ಮಣ್ಯಪುರ ಮುಖ್ಯ ರಸ್ತೆ ಸುತ್ತಮುತ್ತ ಸಂಜೆಯಿಂದಲೂ ಮಳೆ ಅಬ್ಬರಿಸಿದೆ.  ಧಾರಾಕಾರ ಮಳೆಯಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮೆಟ್ರೋ ನಿಲ್ದಾಣಗಳ ಕೆಳಗೆ ವಾಹನ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ. ಜೋರು ಮಳೆ ಹಿನ್ನೆಲೆ ಮುಂದೆ ಸಾಗಲಾಗದೆ ಸವಾರರು ಕೈಕಟ್ಟಿನಿಂತಿದ್ದಾರೆ.

ಹೆಬ್ಬಾಳ ವೃತ್ತದಲ್ಲಿ ನೀರು ನಿಂತಿರುವುದರಿಂದ ವೀರಣ್ಣಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ದಯಮಾಡಿ ಸಹಕರಿಸಿ ಎಂದು ಬೆಂಗಳೂರು ಟ್ರಾಫಿಕ್​ ಪೊಲೀಸರು ಮನವಿ ಮಾಡಿದ್ದಾರೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ ಹಿನ್ನೆಲೆ ಇನ್ನೂ 4 ದಿನ ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಮನೆಗಳಿಗೆ ಹೋಗುವ ಜನರಿಗೆ ಮಳೆ ಎಫೆಕ್ಟ್ ತಟ್ಟಿದೆ. ಕಳೆದ ಅರ್ಧ ಗಂಟೆಗೂ ಕಾಲ ಅಧಿಕ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:59 pm, Mon, 5 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ