AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ

ಬೆಂಗಳೂರು ಮಹಾನಗರದಾದ್ಯಂತ ಜೋರು ಮಳೆಯಾಗಿದೆ. ಮೊದಲ ಶ್ರಾವಣ ಸೋಮವಾರದಂದು ಬೆಂಗಳೂರಿಗರಿಗೆ ಮಳೆರಾಯ ಶಾಕ್​ ನೀಡಿದ್ದಾನೆ. ರಾತ್ರಿ ಸುರಿದ ಎರಡನೇ ಸುತ್ತಿನ ನಿರಂತರ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ರಸ್ತೆಗಳಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದೆ.

ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on:Aug 05, 2024 | 10:15 PM

ಬೆಂಗಳೂರು, ಆಗಸ್ಟ್​ 05: ಇಂದು(ಆಗಸ್ಟ್​ 05) ಮೊದಲ ಶ್ರಾವಣ ಸೋಮವಾರದಂದು ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, (rain) ಇದೀಗ ರಾತ್ರಿ ಎರಡನೇ ಸುತ್ತಿನ ಮಳೆ ಜೋರಾಗಿದೆ. ಸಂಜೆಗಿಂತ ರಾತ್ರಿ ಮಳೆಯಾರ್ಭಟ ಜೋರಾಗಿದೆ. ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಿಲಿಕಾನ್​ ಸಿಟಿ ಮಂದಿ ಬೆಚ್ಚಿಬಿದ್ದಿದ್ದು, ಎಲ್ಲೆಡೆ ನೀರು ತುಂಬಿಕೊಂಡು ವಾಹನ ಸವಾರರು ಟ್ರಾಫಿಕ್​ನಿಂದ ಪರದಾಡುವಂತಾಗಿದೆ.

ರಾತ್ರಿ ವೇಳೆ ಬಂದ ಭಾರೀ ಧಾರಾಕಾರ ಮಳೆಗೆ ನಗರದ ರಸ್ತೆಗಳಲ್ಲಿ ಮಿನಿ ಕೆರೆಗಳು ನಿರ್ಮಾಣವಾಗಿವೆ. ವಾಹನ ಸವಾರರು ಮಳೆಗೆ ಹೈರಾಣಾಗಿದ್ದಾರೆ. ಬೆಂಗಳೂರಿನ ಕೆಂಗೇರಿ, ರಾಜರಾಜೇಶ್ವರಿನಗರ, ಈಜಿಪುರ, ಶಾಂತಿನಗರ, ವಿಜಯನಗರ, ಜಯನಗರ, ಕೆ.ಆರ್.ಮಾರ್ಕೆಟ್, ಬನಶಂಕರಿ, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ವೃತ್ತ, ವಿಧಾನಸೌಧದ ಸುತ್ತಮುತ್ತ ಭಾರೀ ವರ್ಷಧಾರೆ ಸುರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲೂ ಮಳೆ ಸುರಿಯುತ್ತಿದ್ದು, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ, ಸುಬ್ರಹ್ಮಣ್ಯಪುರ ಮುಖ್ಯ ರಸ್ತೆ ಸುತ್ತಮುತ್ತ ಸಂಜೆಯಿಂದಲೂ ಮಳೆ ಅಬ್ಬರಿಸಿದೆ.  ಧಾರಾಕಾರ ಮಳೆಯಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮೆಟ್ರೋ ನಿಲ್ದಾಣಗಳ ಕೆಳಗೆ ವಾಹನ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ. ಜೋರು ಮಳೆ ಹಿನ್ನೆಲೆ ಮುಂದೆ ಸಾಗಲಾಗದೆ ಸವಾರರು ಕೈಕಟ್ಟಿನಿಂತಿದ್ದಾರೆ.

ಹೆಬ್ಬಾಳ ವೃತ್ತದಲ್ಲಿ ನೀರು ನಿಂತಿರುವುದರಿಂದ ವೀರಣ್ಣಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ದಯಮಾಡಿ ಸಹಕರಿಸಿ ಎಂದು ಬೆಂಗಳೂರು ಟ್ರಾಫಿಕ್​ ಪೊಲೀಸರು ಮನವಿ ಮಾಡಿದ್ದಾರೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ ಹಿನ್ನೆಲೆ ಇನ್ನೂ 4 ದಿನ ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಮನೆಗಳಿಗೆ ಹೋಗುವ ಜನರಿಗೆ ಮಳೆ ಎಫೆಕ್ಟ್ ತಟ್ಟಿದೆ. ಕಳೆದ ಅರ್ಧ ಗಂಟೆಗೂ ಕಾಲ ಅಧಿಕ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:59 pm, Mon, 5 August 24

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್