AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ

ಬೆಂಗಳೂರು ಮಹಾನಗರದಾದ್ಯಂತ ಜೋರು ಮಳೆಯಾಗಿದೆ. ಮೊದಲ ಶ್ರಾವಣ ಸೋಮವಾರದಂದು ಬೆಂಗಳೂರಿಗರಿಗೆ ಮಳೆರಾಯ ಶಾಕ್​ ನೀಡಿದ್ದಾನೆ. ರಾತ್ರಿ ಸುರಿದ ಎರಡನೇ ಸುತ್ತಿನ ನಿರಂತರ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ರಸ್ತೆಗಳಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದೆ.

ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
Vinayak Hanamant Gurav
| Edited By: |

Updated on:Aug 05, 2024 | 10:15 PM

Share

ಬೆಂಗಳೂರು, ಆಗಸ್ಟ್​ 05: ಇಂದು(ಆಗಸ್ಟ್​ 05) ಮೊದಲ ಶ್ರಾವಣ ಸೋಮವಾರದಂದು ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, (rain) ಇದೀಗ ರಾತ್ರಿ ಎರಡನೇ ಸುತ್ತಿನ ಮಳೆ ಜೋರಾಗಿದೆ. ಸಂಜೆಗಿಂತ ರಾತ್ರಿ ಮಳೆಯಾರ್ಭಟ ಜೋರಾಗಿದೆ. ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಿಲಿಕಾನ್​ ಸಿಟಿ ಮಂದಿ ಬೆಚ್ಚಿಬಿದ್ದಿದ್ದು, ಎಲ್ಲೆಡೆ ನೀರು ತುಂಬಿಕೊಂಡು ವಾಹನ ಸವಾರರು ಟ್ರಾಫಿಕ್​ನಿಂದ ಪರದಾಡುವಂತಾಗಿದೆ.

ರಾತ್ರಿ ವೇಳೆ ಬಂದ ಭಾರೀ ಧಾರಾಕಾರ ಮಳೆಗೆ ನಗರದ ರಸ್ತೆಗಳಲ್ಲಿ ಮಿನಿ ಕೆರೆಗಳು ನಿರ್ಮಾಣವಾಗಿವೆ. ವಾಹನ ಸವಾರರು ಮಳೆಗೆ ಹೈರಾಣಾಗಿದ್ದಾರೆ. ಬೆಂಗಳೂರಿನ ಕೆಂಗೇರಿ, ರಾಜರಾಜೇಶ್ವರಿನಗರ, ಈಜಿಪುರ, ಶಾಂತಿನಗರ, ವಿಜಯನಗರ, ಜಯನಗರ, ಕೆ.ಆರ್.ಮಾರ್ಕೆಟ್, ಬನಶಂಕರಿ, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ವೃತ್ತ, ವಿಧಾನಸೌಧದ ಸುತ್ತಮುತ್ತ ಭಾರೀ ವರ್ಷಧಾರೆ ಸುರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲೂ ಮಳೆ ಸುರಿಯುತ್ತಿದ್ದು, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ, ಸುಬ್ರಹ್ಮಣ್ಯಪುರ ಮುಖ್ಯ ರಸ್ತೆ ಸುತ್ತಮುತ್ತ ಸಂಜೆಯಿಂದಲೂ ಮಳೆ ಅಬ್ಬರಿಸಿದೆ.  ಧಾರಾಕಾರ ಮಳೆಯಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮೆಟ್ರೋ ನಿಲ್ದಾಣಗಳ ಕೆಳಗೆ ವಾಹನ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ. ಜೋರು ಮಳೆ ಹಿನ್ನೆಲೆ ಮುಂದೆ ಸಾಗಲಾಗದೆ ಸವಾರರು ಕೈಕಟ್ಟಿನಿಂತಿದ್ದಾರೆ.

ಹೆಬ್ಬಾಳ ವೃತ್ತದಲ್ಲಿ ನೀರು ನಿಂತಿರುವುದರಿಂದ ವೀರಣ್ಣಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ದಯಮಾಡಿ ಸಹಕರಿಸಿ ಎಂದು ಬೆಂಗಳೂರು ಟ್ರಾಫಿಕ್​ ಪೊಲೀಸರು ಮನವಿ ಮಾಡಿದ್ದಾರೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ ಹಿನ್ನೆಲೆ ಇನ್ನೂ 4 ದಿನ ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಮನೆಗಳಿಗೆ ಹೋಗುವ ಜನರಿಗೆ ಮಳೆ ಎಫೆಕ್ಟ್ ತಟ್ಟಿದೆ. ಕಳೆದ ಅರ್ಧ ಗಂಟೆಗೂ ಕಾಲ ಅಧಿಕ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:59 pm, Mon, 5 August 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ