Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿಂದು ಅರ್ಧ ಗಂಟೆ ಸುರಿದ ಮಳೆಗೆ ಬಿದ್ದ 25 ಮರಗಳು, ಎಲ್ಲೆಲ್ಲಿ ಏನಾಗಿದೆ? ಇಲ್ಲಿದೆ ವಿವರ

ಇಂದು ಜಸ್ಟ್ ಅರ್ಧಗಂಟೆ ಸುರಿದ ಮಳೆ ಬೆಂಗಳೂರನ್ನೇ ಅಲ್ಲಾಡಿಸಿದೆ. ಒಂದು ಕಡೆ ಅಂಡರ್‌ಪಾಸ್‌ಗಳು ಜಲಾವೃತಗೊಂಡರೆ, ಮತ್ತೊಂದೆಡೆ 25ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ವಾನಹ ಸವಾರರು ಪರದಾಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಆನೇಕಲ್‌ ಭಾಗದಲ್ಲೂ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆ ಆಗಿದೆ. ಸೂರ್ಯಸಿಟಿಯಲ್ಲಿ ಆಸ್ಪತ್ರೆಯ ಶೀಟ್‌ಗಳೇ ಹಾರಿ ಹೋಗಿವೆ.

ಬೆಂಗಳೂರಿನಲ್ಲಿಂದು ಅರ್ಧ ಗಂಟೆ ಸುರಿದ ಮಳೆಗೆ ಬಿದ್ದ 25 ಮರಗಳು, ಎಲ್ಲೆಲ್ಲಿ ಏನಾಗಿದೆ? ಇಲ್ಲಿದೆ ವಿವರ
ಬೆಂಗಳೂರಿನಲ್ಲಿಂದು ಅರ್ಧ ಗಂಟೆ ಸುರಿದ ಮಳೆಗೆ ಬಿದ್ದ 25 ಮರಗಳು, ಎಲ್ಲೆಲ್ಲಿ ಏನಾಗಿದೆ? ಇಲ್ಲಿದೆ ವಿವರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 06, 2024 | 10:01 PM

ಬೆಂಗಳೂರು, ಮೇ 06: ಮೂರು ದಿನಗಳ ಬಳಿಕ ಇಂದು ಮತ್ತೆ ಬೆಂಗಳೂರಿಗೆ ವರುಣನ (Rain) ಆಗಮನವಾಗಿತ್ತು. ಸಂಜೆಯಾಗ್ತಿದ್ದಂತೆ ಮಳೆರಾಯನ ದರ್ಶನ ಆಗಿತ್ತು. ಅದು ಅಂತಿಂಥ ಮಳೆ ಅಲ್ಲ, ಜೋರುಗಾಳಿ, ಆಲಿಕಲ್ಲುನೊಂದಿಗೆ ಆರಂಭವಾದ ಮಳೆ ಬೆಂಗಳೂರನ್ನ (Bangaluru) ತಂಪು ಮಾಡುವುದರೊಂದಿಗೆ ಹತ್ತಾರು ಅವಾಂತರಗಳನ್ನು ಕೂಡ ಸೃಷ್ಟಿಸಿದೆ. ಜಸ್ಟ್ ಅರ್ಧಗಂಟೆ ಸುರಿದ ಮಳೆ ಬೆಂಗಳೂರನ್ನೇ ಅಲ್ಲಾಡಿಸಿದೆ. ಒಂದು ಕಡೆ ಅಂಡರ್‌ಪಾಸ್‌ಗಳು ಜಲಾವೃತಗೊಂಡರೆ, ಮತ್ತೊಂದೆಡೆ 25ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ವಾನಹ ಸವಾರರು ಪರದಾಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

25ಕ್ಕೂ ಹೆಚ್ಚು ಭಾಗದಲ್ಲಿ ಧರೆಗೆ ಉರುಳಿದ ಮರಗಳು 

ಅರ್ಧಗಂಟೆ ಬಂದ ಮಳೆಗೆ ನಗರದಲ್ಲಿ 25ಕ್ಕೂ ಹೆಚ್ಚು ಭಾಗದಲ್ಲಿ ಮರಗಳು ಧರೆಗೆ ಉರುಳಿವೆ. ನಗರದ ಜಯನಗರ, ಬಸವನಗುಡಿ, ಮಲ್ಲೆಶ್ವರಂ, ಕೋರಮಂಗಲ, ಬಿಟಿಎಂ ಲೇಔಟ್, ಯಶವಂತರಪುರ ಸೇರದಿಂತೆ ಹಲವೆಡೆ ಮರಗಳು ಧರೆಗೆ ಉರುಳಿವೆ. ದೂರು ಬಂದ ನಗರಗಳಲ್ಲಿ ಮರಗಳನ್ನು ಬಿಬಿಎಂಪಿ ಸಿಬ್ಬಂದಿಗಳು ತೆರೆವುಗೊಳಿಸಿದ್ದಾರೆ ಎಂದು ಬಿಬಿಎಂಪಿ ಕಂಟ್ರೋಲ್ ರೂಮ್ ಇಂದ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: Bengaluru Rain Today: ಬೆಂಗಳೂರಿನಲ್ಲಿ ತಂಪೆರೆದ ವರುಣ, ನಗರದ ವಿವಿಧೆಡೆ ಆಲಿಕಲ್ಲು ಮಳೆ

ಇಂದು ಸುರಿದ ಮಳೆಗೆ ರಸ್ತೆಗಳು ಕೆರೆಯಂತಾಗಿವೆ. ಮಂತ್ರಿಮಾಲ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೀರು ಹೋಗಲು ಸ್ಥಳವಕಾಶ ಇಲ್ಲದೆ ರಸ್ತೆ ಮೇಲೆ ಸುಮಾರು 2 ಅಡಿಯಷ್ಟು ನೀರು ತುಂಬಿಕೊಂಡಿದೆ. ಹೀಗಾಗಿ ವಾಹನ ಸವಾರರಿಗೆ ಸಂಚರಿಸಲು ಸಮಸ್ಯೆ ಆಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಆನೇಕಲ್‌ನಲ್ಲಿ ಆಲಿಕಲ್ಲು ಮಳೆ: ಬಿರುಗಾಳಿಗೆ ಕಿತ್ತು ಹೋದ ಶೀಟ್‌ಗಳು!

ಇನ್ನು ಆನೇಕಲ್‌ ಭಾಗದಲ್ಲೂ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆ ಆಗಿದೆ. ಸೂರ್ಯಸಿಟಿಯಲ್ಲಿ ಆಸ್ಪತ್ರೆಯ ಶೀಟ್‌ಗಳೇ ಹಾರಿ ಹೋಗಿವೆ. ಪಾರ್ಕಿಂಗ್‌ನಲ್ಲಿದ್ದ ಕಾರುಗಳು ಜಖಂಗೊಂಡಿವೆ. ಆನೇಕಲ್‌ ತಾಲೂಕಿನ ಬನಹಳ್ಳಿಯಲ್ಲಿ 10 ಕ್ಕೂ ಹೆಚ್ಚು ಮನೆಗಳ ಶೀಟ್‌ಗಳು ಹಾರಿ ಹೋಗಿದ್ದು, ಸಿಮೆಂಟ್‌ ಬ್ರಿಕ್ಸ್‌ಗಳು ಕೂಡಾ ನೆಲಕ್ಕುರುಳಿವೆ. ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ.

ಇನ್ನು ಹೆಣ್ಣೂರು ಮುಖ್ಯರಸ್ತೆಯ ಲಿಂಗರಾಜ ಪುರಂ ಬಳಿ ಚಲಿಸುತ್ತಿದ್ದ ಕಾರ್‌ ಮೇಲೆ ಮರ ಉರುಳಿಬಿದ್ದಿತ್ತು. ಅದೃಷ್ಟವಶಾತ್‌ ಕಾರ್‌ನಲ್ಲಿದ್ದವರು ಬಚಾವ್ ಆಗಿದ್ದಾರೆ. ಪಾಲಿಕೆ ಸಿಬ್ಬಂದಿ ಹಾಗೂ ಟ್ರಾಫಿಕ್‌ ಪೊಲೀಸರು ಮರತೆರವುಗೊಳಿಸೋ ಕೆಲಸ ಮಾಡಿದರು.

ಇದನ್ನೂ ಓದಿ: Bengaluru Rain: ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ

ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ಬೆಂಗಳೂರು ಸದ್ಯ ಕೂಲ್ ಕೂಲ್ ಆಗಿದೆ. ಆದರೆ ಪಾಲಿಕೆ ನಿರ್ಲಕ್ಷ್ಯ ಹತ್ತಾರು ಅವಾಂತರಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ