Bengaluru Rains: ಬೆಂಗಳೂರಿನಲ್ಲಿ ಮುಂದುವರೆದ ಮಳೆ: ಚಿನ್ನಸ್ವಾಮಿ ಸ್ಟೇಡಿಯಂ ಸೇರಿ ಹಲವೆಡೆ ಮಳೆ ಆರಂಭ

ಬೆಂಗಳೂರು ನಗರದಲ್ಲಿ ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ. ಅದೇ ರೀತಿಯಾಗಿ ಇಂದು ಕೂಡ ಕೆಂಗೇರಿ, ನಾಗರಬಾವಿ, ರಾಜಾಜಿನಗರ, ಮಲ್ಲೇಶ್ವರ, ಬಸವೇಶ್ವರನಗರ, ಮೆಜೆಸ್ಟಿಕ್​ನಲ್ಲಿ ಮಳೆ ಆಗಿದೆ. ಮಳೆರಾಯನ ಆರ್ಭಟಕ್ಕೆ ಜನರು ಪರದಾಡಿದ್ದಾರೆ. ಮಳೆರಾಯನ ಕಾಟ ಆರ್‌ಸಿಬಿ ಮತ್ತು ಸಿಎಸ್​ಕೆ ಪಂದ್ಯಕ್ಕೂ ತಟ್ಟಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಕೂಡ ಮಳೆ ಆಗಿದೆ.

Bengaluru Rains: ಬೆಂಗಳೂರಿನಲ್ಲಿ ಮುಂದುವರೆದ ಮಳೆ: ಚಿನ್ನಸ್ವಾಮಿ ಸ್ಟೇಡಿಯಂ ಸೇರಿ ಹಲವೆಡೆ ಮಳೆ ಆರಂಭ
ಬೆಂಗಳೂರಿನಲ್ಲಿ ಮುಂದುವರೆದ ಮಳೆ: ಚಿನ್ನಸ್ವಾಮಿ ಸ್ಟೇಡಿಯಂ ಸೇರಿ ಹಲವೆಡೆ ಮಳೆ ಆರಂಭ
Follow us
|

Updated on:May 18, 2024 | 8:39 PM

ಬೆಂಗಳೂರು, ಮೇ 18: ನಗರದಲ್ಲಿ ಕಳೆದೊಂದು ವಾರದಿಂದ ಮಳೆ (Rain) ಸುರಿಯುತ್ತಿದೆ. ಇಂದು ಕೂಡ ಕೆಂಗೇರಿ, ನಾಗರಬಾವಿ, ಸದಾಶಿವನಗರ, ಶೇಷಾದ್ರಿಪುರ, ವಸಂತ ನಗರ, ಬನಶಂಕರಿ, ನಾಯಂಡಹಳ್ಳಿ, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಶಿವಾಜಿನಗರ, ಕೆಐಎಎಲ್ ವಿಮಾನ ನಿಲ್ದಾಣ ಬೆಂಗಳೂರು, ಮೆಜೆಸ್ಟಿಕ್​ ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರು ಮಳೆ ಆಗಿದೆ. ಮಳೆರಾಯನ ಆರ್ಭಟಕ್ಕೆ ಜನರು ಪರದಾಡಿದ್ದಾರೆ. ಇಂದು ಆರ್‌ಸಿಬಿ ಮತ್ತು ಸಿಎಸ್​ಕೆ ಪಂದ್ಯ ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಆ ಭಾಗದ ಸುತ್ತಮುತ್ತ ಕೂಡ ಮಳೆ ಆಗಿದೆ.

ಇನ್ನು ನಗರದಲ್ಲಿ ಬೆಳಿಗ್ಗೆಯಿಂದಲೇ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿಯೂ ಮಳೆ ಆಗಿದೆ. ಗಡಿ ನಾಡು ಚಾಮರಾಜನಗರದಲ್ಲಿ  ವರುಣದೇವ ಧರೆಗಿಳಿದಿದ್ದು, ಜನರ ಮೊಗದ ಮೇಲೆ ಮಂದಹಾಸ ತಂದಿದ್ದಾನೆ. ನಗರದ ಹಲವೆಡೆ ಕಳೆದ ಅರ್ಧ ಗಂಟೆಯಿಂದಲೂ ಮಳೆ ಸುರಿದೆ. ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಕಳೆದ ವರ್ಷ ಮಳೆ ಬಾರದೆ ಕೆರೆ ಕಟ್ಟೆಗಳು ಬತ್ತಿ ಹೋಗಿದ್ದವು. ಈ ಭಾರಿ ಪೂರ್ವ ಮುಂಗಾರು ಆರಂಭ ಹಿನ್ನಲೆ ರೈತರಿಗೆ ಸಂತಸ ತಂದಿದೆ.

ಹಾಸನದಲ್ಲಿ ಮುಂದುವರೆದ ಮಳೆ

ಹಾಸನ ಜಿಲ್ಲೆಯ ಬಹುತೇಕ ಕಡೆ ಮಳೆ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ವಿವಿಧೆಡೆ ಮಳೆ ಆಗುತ್ತಿದೆ. ಇಂದು ಮಧ್ಯಾಹ್ನವೇ ಸುಮಾರು ಅರ್ಧ ಗಂಟೆಯಿಂದ ಮಳೆ ಸುರಿದಿದೆ. ಅತಿಯಾದ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಖುಷಿ ಆಗಿದ್ದು, ಕೃಷಿ ಚಟುವಟಿಕೆಗಳನ್ನು ಜಿಲ್ಲೆಯ ರೈತರು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಇಂದು ಸುರಿದ ಮಳೆ ಚಿಕ್ಕಮಗಳೂರುನಲ್ಲಿ ಎಂದಿನಂತೆ ಸುರಿಯುತ್ತಿದೆ; ಬೆಂಗಳೂರಲ್ಲಿ ಇವತ್ತು ಬೇಡ!

ಚಿಕ್ಕಬಳ್ಳಾಪುರದತ್ತ ಕೂಡ ವರುಣ ಮುಖ ಮಾಡಿದ್ದು, ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ಜೋರು ಮಳೆಗೆ ಅವಾಂತರಗಳು ಸಂಭವಿಸಿದ್ದು, ಸಿ.ಎಸ್.ಐ.ಆಸ್ಪತ್ರೆ ರಸ್ತೆಯಲ್ಲಿ ವಿದ್ಯುತ್‍ ಕಂಬಗಳ ಮೇಲೆ ಮರ ಉರುಳಿಬಿದಿದ್ದೆ. ಅದೃಷ್ಟವಶಾತ್ ಅನಾಹುತ ತಪ್ಪಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:26 pm, Sat, 18 May 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!