AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆ: ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್

ಸರ್ಕಾರ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​ ವೇಳೆ ಮಳೆರಾಯ ಅಡ್ಡಿಪಡಿಸಿದ್ದು, ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಸಿಲ್ಕ್ ಬೋರ್ಡ್, ಹೆಚ್​ಎಸ್​ಆರ್​ ಲೇಔಟ್ ಕಡೆ ಜಿಟಿಜಿಟಿ ಮಳೆ ಆರಂಭವಾಗಿದೆ.

Bengaluru Rains: ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆ: ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆ: ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್
Anil Kalkere
| Edited By: |

Updated on:May 22, 2024 | 4:08 PM

Share

ಬೆಂಗಳೂರು, ಮೇ 22: ಸರ್ಕಾರ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​ ವೇಳೆ ಮಳೆರಾಯ ಅಡ್ಡಿಪಡಿಸಿದ್ದು, ನಗರದ ಹಲವೆಡೆ ಜಿಟಿಜಿಟಿ ಮಳೆ (Rain) ಶುರುವಾಗಿದೆ. ಸಿಲ್ಕ್ ಬೋರ್ಡ್, ಹೆಚ್​ಎಸ್​ಆರ್​ ಲೇಔಟ್, ಟೌನ್ ಹಾಲ್, ಕೆಆರ್ ಮಾರ್ಕೆಟ್, ಕಾರ್ಪೋರೇಷನ್, ಕೆಆರ್​ ಸರ್ಕಲ್​ ಸೇರಿ ಬೆಂಗಳೂರಿನ (Bengaluru) ಹಲವೆಡೆ ಮಳೆ ಆರಂಭವಾಗಿದೆ. ಸದ್ಯ ಮಳೆ ಹಿನ್ನಲೆ ಸಿಲಿಕಾನ್ ಸಿಟಿ ಕೂಲ್ ಕೂಲ್​ ಆಗಿದ್ದು, ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಆಗಲಿದೆ.

ಇನ್ನು ನಗರದಲ್ಲಿ ಬೆಳಿಗ್ಗೆಯಿಂದಲೇ ನಗರದಲ್ಲಿ ಎಲ್ಲೆಡೆ ಮೋಡ ಕವಿದ ವಾತಾವರಣವಿತ್ತು. ಸದ್ಯ ಮಳೆ ಆದರೂ ಕೂಡ ಇನ್ನು ಮೋಡ ಕವಿದ ವಾತಾವರಣವಿದ್ದು ಸಂಜೆ ಮತ್ತೆ ಮಳೆ ಆಗುವ ಸಾಧ್ಯತೆ ಇದೆ.

ಸಿಎಂ, ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್‌ಗೆ ಮಳೆರಾಯ ಅಡ್ಡಿ

ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ವೇಳೆ ಮಳೆರಾಯ ಅಡ್ಡಿಪಡಿಸಿದ್ದಾನೆ. ಬೆಳ್ಳಂದೂರು, ಯಮಲೂರು, ದೊಮ್ಮಲೂರು, ಅಗರ ಸುತ್ತಮುತ್ತ ಮಳೆ ಧಾರಾಕಾರ ಮಳೆ ಆಗಿದೆ. ಹೀಗಾಗಿ ಸಿಟಿ ರೌಂಡ್ಸ್ ಮೊಟಕುಗೊಳಸಿದರು.

ಇದನ್ನೂ ಓದಿ: ಬೆಂಗಳೂರು: ಮಳೆಯಿಂದಾಗಿ ಮತ್ತೆ ಬಾಯ್ದೆರೆದ ರಸ್ತೆಗುಂಡಿಗಳು, 15 ದಿನದ ಮಳೆಗೆ 5,500 ರಸ್ತೆಗುಂಡಿ ಸೃಷ್ಟಿ

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರಗಳೇ ಸಂಭವಿಸಿವೆ. ಪ್ರತಿಷ್ಠಿತ ವಿಲ್ಲಾಗಳೇ ನೀರುಪಾಲಾಗಿವೆ. ಮಳೆಯಿಂದಾಗಿ ಬೆಳೆಗಳೆಲ್ಲಾ ನಾಶವಾಗಿವೆ. ರಸ್ತೆಗಳು ಕೆರೆಗಳಂತಾಗಿವೆ. ಮನೆಯ ಮುಂದೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುವ ಜೊತೆಗೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಕೆಲವೇ ದಿನಗಳ ಮಳೆಗೆ ಬೆಂಗಳೂರಿನಲ್ಲಿ 800 ವಿದ್ಯುತ್ ಕಂಬ ಧರೆಗೆ! ವಾಲಿವೆ ಹಲವಾರು ಕಂಬ

ಮೈಸೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಪಿರಿಯಾಪಟ್ಟಣದ ಎಲ್ಲಾ ಕೆರೆಕಟ್ಟೆಗಳು ಕೋಡಿ ಒಡೆದಿವೆ. ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಆಟೋ ಉಳಿಸಿಕೊಳ್ಳಲು ಯುವಕ ಹರಸಾಹಸ ಪಟ್ಟಿದ್ದಾನೆ. ಹಗ್ಗದಲ್ಲಿ ಕಟ್ಟಿ ಆಟೋವನ್ನು ಉಳಿಸಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:36 pm, Wed, 22 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?