AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

Bengaluru Rameshwaram cafe blast Case ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಟ್ವೀಟ್ ಮಾಡಿದ್ದು, ಬಾಸ್ಟ್ ಪ್ರಕರಣದ ​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತಿಳಿಸಿದೆ.

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
TV9 Web
| Edited By: |

Updated on:Mar 28, 2024 | 8:12 PM

Share

ಬೆಂಗಳೂರು, (ಮಾರ್ಚ್ 28): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ(Bengaluru Rameshwaram cafe blast Case)  ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ಇಂದು (ಮಾರ್ಚ್ 28) ಎನ್​ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್​ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ.

ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್​ ಶರೀಫ್​ ನನ್ನು ಬಂಧಿಸಲಾಗಿದೆ ಎಂದು ಎನ್​ಐ ಟ್ವೀಟ್​ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್​ ಶರೀಫ್​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ಮಾಹಿತಿ ನೀಡಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಶಂಕಿತ ಉಗ್ರನಿಗೆ ತೀರ್ಥಹಳ್ಳಿಯ ಲಿಂಕ್ ಇದೆ! ಪಿನ್​ ಟು ಪಿನ್ ಡೀಟೇಲ್ಸ್​ ಇಲ್ಲಿದೆ

ಎನ್​ಐಎ ಅಧಿಕಾರಿಗಳು ಕರ್ನಾಟಕ ಸೇರಿದಂತೆ ವಿವಿದೆಡೆ ಬಳಿಕ ಕೀ ಕಾಂನ್ಸಪರೇಟರ್​​​ ಆಗಿದ್ದ ಆರೋಪಿ ಮುಜಾಮಿಲ್​ ಶರೀಫ್​ನನ್ನು ಬಂಧಿಸಿದ್ದಾರೆ. ಮುಜಾಮಿಲ್​ ಶರೀಫ್ ಎನ್ನುವಾತ ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮುಸಾವೀರ್​ ಹುಸೇನ್​ಗೆ ತುಂಬಾ ಆಪ್ತನಾಗಿದ್ದ.

ಇನ್ನು ಪ್ರಮುಖವಾಗಿ ಮುಸಾವೀರ್ ಹುಸೇನ್ ಬಾಂಬ್​ ಇಟ್ಟ ಉಗ್ರ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ತನಿಖೆ ವೇಳೆ ಸಂಚು ರೂಪಿಸಿರುವುದು ಸಾಬೀತು ಆದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್ ನನ್ನು ಬಂಧನ ಮಾಡಿದ್ದಾರೆ. ಮುಸಾವೀರ್, ಅಬ್ದುಲ್ ಮತೀನ್ ಸೇರಿ ಬ್ಲಾಸ್ಟ್​ಗೆ ಸಂಚು ರೂಪಿಸಿದ್ದರು. ಸದ್ಯ ಮುಸಾವೀರ್ ಹುಸೇನ್, ಮತೀನ್ ತಾಹಾ ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Thu, 28 March 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ