AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

Bengaluru Rameshwaram cafe blast Case ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಟ್ವೀಟ್ ಮಾಡಿದ್ದು, ಬಾಸ್ಟ್ ಪ್ರಕರಣದ ​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತಿಳಿಸಿದೆ.

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Mar 28, 2024 | 8:12 PM

Share

ಬೆಂಗಳೂರು, (ಮಾರ್ಚ್ 28): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ(Bengaluru Rameshwaram cafe blast Case)  ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ಇಂದು (ಮಾರ್ಚ್ 28) ಎನ್​ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್​ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ.

ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್​ ಶರೀಫ್​ ನನ್ನು ಬಂಧಿಸಲಾಗಿದೆ ಎಂದು ಎನ್​ಐ ಟ್ವೀಟ್​ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್​ ಶರೀಫ್​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ಮಾಹಿತಿ ನೀಡಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಶಂಕಿತ ಉಗ್ರನಿಗೆ ತೀರ್ಥಹಳ್ಳಿಯ ಲಿಂಕ್ ಇದೆ! ಪಿನ್​ ಟು ಪಿನ್ ಡೀಟೇಲ್ಸ್​ ಇಲ್ಲಿದೆ

ಎನ್​ಐಎ ಅಧಿಕಾರಿಗಳು ಕರ್ನಾಟಕ ಸೇರಿದಂತೆ ವಿವಿದೆಡೆ ಬಳಿಕ ಕೀ ಕಾಂನ್ಸಪರೇಟರ್​​​ ಆಗಿದ್ದ ಆರೋಪಿ ಮುಜಾಮಿಲ್​ ಶರೀಫ್​ನನ್ನು ಬಂಧಿಸಿದ್ದಾರೆ. ಮುಜಾಮಿಲ್​ ಶರೀಫ್ ಎನ್ನುವಾತ ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮುಸಾವೀರ್​ ಹುಸೇನ್​ಗೆ ತುಂಬಾ ಆಪ್ತನಾಗಿದ್ದ.

ಇನ್ನು ಪ್ರಮುಖವಾಗಿ ಮುಸಾವೀರ್ ಹುಸೇನ್ ಬಾಂಬ್​ ಇಟ್ಟ ಉಗ್ರ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ತನಿಖೆ ವೇಳೆ ಸಂಚು ರೂಪಿಸಿರುವುದು ಸಾಬೀತು ಆದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್ ನನ್ನು ಬಂಧನ ಮಾಡಿದ್ದಾರೆ. ಮುಸಾವೀರ್, ಅಬ್ದುಲ್ ಮತೀನ್ ಸೇರಿ ಬ್ಲಾಸ್ಟ್​ಗೆ ಸಂಚು ರೂಪಿಸಿದ್ದರು. ಸದ್ಯ ಮುಸಾವೀರ್ ಹುಸೇನ್, ಮತೀನ್ ತಾಹಾ ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Thu, 28 March 24

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್