AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

Bengaluru Rameshwaram cafe blast Case ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಟ್ವೀಟ್ ಮಾಡಿದ್ದು, ಬಾಸ್ಟ್ ಪ್ರಕರಣದ ​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತಿಳಿಸಿದೆ.

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
TV9 Web
| Edited By: |

Updated on:Mar 28, 2024 | 8:12 PM

Share

ಬೆಂಗಳೂರು, (ಮಾರ್ಚ್ 28): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ(Bengaluru Rameshwaram cafe blast Case)  ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ಇಂದು (ಮಾರ್ಚ್ 28) ಎನ್​ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್​ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ.

ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್​ ಶರೀಫ್​ ನನ್ನು ಬಂಧಿಸಲಾಗಿದೆ ಎಂದು ಎನ್​ಐ ಟ್ವೀಟ್​ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್​ ಶರೀಫ್​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ಮಾಹಿತಿ ನೀಡಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಶಂಕಿತ ಉಗ್ರನಿಗೆ ತೀರ್ಥಹಳ್ಳಿಯ ಲಿಂಕ್ ಇದೆ! ಪಿನ್​ ಟು ಪಿನ್ ಡೀಟೇಲ್ಸ್​ ಇಲ್ಲಿದೆ

ಎನ್​ಐಎ ಅಧಿಕಾರಿಗಳು ಕರ್ನಾಟಕ ಸೇರಿದಂತೆ ವಿವಿದೆಡೆ ಬಳಿಕ ಕೀ ಕಾಂನ್ಸಪರೇಟರ್​​​ ಆಗಿದ್ದ ಆರೋಪಿ ಮುಜಾಮಿಲ್​ ಶರೀಫ್​ನನ್ನು ಬಂಧಿಸಿದ್ದಾರೆ. ಮುಜಾಮಿಲ್​ ಶರೀಫ್ ಎನ್ನುವಾತ ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮುಸಾವೀರ್​ ಹುಸೇನ್​ಗೆ ತುಂಬಾ ಆಪ್ತನಾಗಿದ್ದ.

ಇನ್ನು ಪ್ರಮುಖವಾಗಿ ಮುಸಾವೀರ್ ಹುಸೇನ್ ಬಾಂಬ್​ ಇಟ್ಟ ಉಗ್ರ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ತನಿಖೆ ವೇಳೆ ಸಂಚು ರೂಪಿಸಿರುವುದು ಸಾಬೀತು ಆದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್ ನನ್ನು ಬಂಧನ ಮಾಡಿದ್ದಾರೆ. ಮುಸಾವೀರ್, ಅಬ್ದುಲ್ ಮತೀನ್ ಸೇರಿ ಬ್ಲಾಸ್ಟ್​ಗೆ ಸಂಚು ರೂಪಿಸಿದ್ದರು. ಸದ್ಯ ಮುಸಾವೀರ್ ಹುಸೇನ್, ಮತೀನ್ ತಾಹಾ ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Thu, 28 March 24

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​