AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬ್ಲಾಸ್ಟ್​: ಉದ್ಯಮದಲ್ಲಿ ಬೆಳವಣಿಗೆ ಸಹಿಸದೆ, ಬೆಂಗಳೂರು ಅನ್​ಸೇಫ್​ ಅಂತ ಸೃಷ್ಟಿಸಲು ಈ ರೀತಿ ಮಾಡಿರಬಹುದು; ಪರಮೇಶ್ವರ್​​

ಪ್ರಕರಣದ ತನಿಖೆ ಈಗಾಗಲೆ ಎಂಡು ತಂಡಗಳನ್ನು ರಚನೆ ಮಾಡಿದ್ದೇವೆ. ‌ಎಲ್ಲ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ. ಅಲ್ಲದೆ ಎನ್​ಐಎ ಮತ್ತು ಎನ್​ಎಸ್​ಜಿ ತಂಡದವರೂ ತನಿಖೆ ನಡೆಸುತ್ತಿದ್ದಾರೆ. ಕೆಲವು ಮಾಹಿತಿಗಳು ನಮಗೆ ಲಭ್ಯವಾಗಿವೆ ಗೃಹ ಸಚಿವ ಜಿ ಪರಮೇಶ್ವರ್​ ಹೇಳಿದರು.

ರಾಮೇಶ್ವರಂ ಕೆಫೆ ಬ್ಲಾಸ್ಟ್​: ಉದ್ಯಮದಲ್ಲಿ ಬೆಳವಣಿಗೆ ಸಹಿಸದೆ, ಬೆಂಗಳೂರು ಅನ್​ಸೇಫ್​ ಅಂತ ಸೃಷ್ಟಿಸಲು ಈ ರೀತಿ ಮಾಡಿರಬಹುದು; ಪರಮೇಶ್ವರ್​​
ಗೃಹ ಸಚಿವ ಜಿ ಪರಮೇಶ್ವರ್​
ಪ್ರಸನ್ನ ಗಾಂವ್ಕರ್​
| Edited By: |

Updated on:Mar 03, 2024 | 12:05 PM

Share

ಬೆಂಗಳೂರು, ಮಾರ್ಚ್​ 03: ರಾಮೇಶ್ವರಂ ಕೆಫೆ​ಯಲ್ಲಿ ಸ್ಫೋಟ (Bengaluru Rameshwaram Cafe Bomb Blast) ಸಂಭವಿಸಿದ ದಿನ ನಾನು ಸ್ಥಳಕ್ಕೆ ಹೋಗಿದ್ದೆ. ರಾಮೇಶ್ವರಂ ಕೆಫೆ​ಯವರು 12 ಕಡೆ ಹೊಟೇಲ್ ಪ್ರಾರಂಭ ಮಾಡಿದ್ದಾರೆ. ಉದ್ಯಮದಲ್ಲಿ ಬೆಳವಣಿಗೆಯಾಗುತ್ತಿರುವುದನ್ನು ಸಹಿಸಲಾಗದವರು ಈ ರೀತಿ ಮಾಡಿರಬಹುದು ಅಂತ ಅಲ್ಲಿನ ಜನ ಹೇಳ್ಳುತ್ತಿದ್ದರು. ಇದಲ್ಲದೆ ಲೋಕಸಭೆ ಚುನಾವಣೆ ಸಮಯದಲ್ಲಿ ಯಾವುದಾದರೂ ಸಂಘಟನೆ ಬೆಂಗಳೂರನ್ನು ಅನ್​ಸೇಫ್ ನಗರ ಮಾಡಬೇಕು ಅಂತ, ನಗರಕ್ಕೆ ಹೆಚ್ಚಿನ ಹೂಡಿಕೆ ಹರಿದು ಬರುತ್ತಿದ್ದು, ಈ ಸಮಯದಲ್ಲಿ ಹೀಗೆ ಮಾಡಿದರೆ ಬಂಡವಾಳ ಹಾಕುವವರು ಬರುವುದಿಲ್ಲ ಅಂತ ಹೀಗೆ ಮಾಡಿರಬಹುದು. ಅಥವಾ ಬೇರೆ ಯಾವುದೋ ಕಾರಣ ಇರಬಹುದು. ಒಟ್ಟಿನಲ್ಲಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಎಷ್ಟೇ ಕಷ್ಟವಾದರೂ ಪ್ರಕರಣ ಬೇಧಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parmeshwara)​ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ಈಗಾಗಲೆ ಎಂಡು ತಂಡಗಳನ್ನು ರಚನೆ ಮಾಡಿದ್ದೇವೆ. ‌ಎಲ್ಲ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ. ಅಲ್ಲದೆ ಎನ್​ಐಎ ಮತ್ತು ಎನ್​ಎಸ್​ಜಿ ತಂಡದವರೂ ತನಿಖೆ ನಡೆಸುತ್ತಿದ್ದಾರೆ. ಕೆಲವು ಮಾಹಿತಿಗಳು ನಮಗೆ ಲಭ್ಯವಾಗಿವೆ. ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ. ಎಫ್​ಎಸ್​ಎಲ್​​ನವರು ಈಗಾಗಲೇ ಮಾದರಿಗಳನ್ನು ಸಂಗ್ರಹಿಸಿ ಟೆಕ್ನಿಕಲ್ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಫೋಟಿಸಿದ ವ್ಯಕ್ತಿಯ ಮಾಹಿತಿ ಸಿಕ್ಕಿದೆ. ವ್ಯಕ್ತಿಯನ್ನು ಆದಷ್ಟು ಬೇಗ ಹಿಡಿಯುತ್ತೇವೆ ಎಂದು ಭರವಸೆ ನೀಡಿದರು.

ಮಂಗಳೂರು ಕುಕ್ಕರ್ ಸ್ಫೋಟಕ್ಕೂ ಮತ್ತು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಟೆಕ್ನಿಕಲ್ ಸಾಮ್ಯತೆ ಇದೆ. ಹಾಗಂತ ಅವರೇ ಮಾಡಿದ್ದಾರೆ ಅಂಥ ಅರ್ಥ ಅಲ್ಲ. ಬ್ಯಾಟಿರಿ, ಮೊಳೆ, ಟೈಮರ್ ಎಲ್ಲವನ್ನು ನೋಡಿದರೆ ಸಾಮ್ಯತೆ ಇದೆ. ಈ ಬಗ್ಗೆ ಇನ್ನೂ ತನಿಖೆ ಮಾಡಬೇಕು ಎಂದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ, ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್ ಸಿಲ್ಲಿ ಅಟೆಂಪ್ಟ್‌‌: ಸಚಿವ ಶರಣಪ್ರಕಾಶ ವಿರುದ್ಧ ಬಿಜೆಪಿ ಆಕ್ರೋಶ

ಬಾಂಬ್ ತೀವ್ರತೆ ಬಹಳ ಕಡಿಮೆ ಇದೆ. ಹೀಗಾಗಿ‌ ದೊಡ್ಡ ಅನಾಹುತ ಆಗಿಲ್ಲ. ಕ್ವಾಂಟಿಟಿ ಕಡಿಮೆ ಇರಬಹುದು. ಹೆಚ್ಚು ಕ್ವಾಂಟಿಟಿ ಉಪಯೋಗಿಸಿದ್ದರೇ ಇಂಪ್ಯಾಕ್ಟ್ ಜಾಸ್ತಿ ಆಗುತ್ತಿತ್ತು. ಬಾಂಬ್ ಸಿಡಿದಾಗ ಮೊಳೆಗಳು, ನಟ್​​ಗಳು ಎಲ್ಲವೂ ಮೇಲೆ ಹೋಗಿವೆ. ಅದು ಮೇಲೆ ಹೋಗದೆ ಪಕ್ಕಕ್ಕೆ ಸಿಡಿದಿದ್ದರೆ ಬಹಳ‌ ಜನರ ಪ್ರಾಣಾಪಾಯ ಆಗುತ್ತಿತ್ತು. ಅದೃಷ್ಟವಶಾತ್ ಮೊಳೆಗಳು ಮೇಲೆ ಹೋಗಿವೆ.

ಪಾಕಿಸ್ತಾನ ಜಿಂದಾಬಾದ್ ಎಂಬ ಪ್ರಕರಣದಲ್ಲಿ ಎಫ್​ಎಸ್​ಎಲ್​​ ವರದಿ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ನಾನು ಯಾವತ್ತೂ 48 ಗಂಟೆಯಲ್ಲಿ ವರದಿ ಬರುತ್ತೆ ಅಂತಾ ಹೇಳಿಲ್ಲ. 5-6 ಆಯಾಮಗಳಲ್ಲಿ ಪರಿಶೀಲನೆ ಮಾಡಬೇಕಾಗುತ್ತೆ. ಎಫ್​ಎಸ್​ಎಲ್​​ ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತೆ. ಎಲ್ಲಾ ಕೆಲಸ ಬಿಟ್ಟು ಇದನ್ನೇ ಮೊದಲು ಮಾಡಿ ಎಂದು ಹೇಳಿದ್ದೇನೆ ಎಂದು ತಿಳಸಿದರು.

ಇನ್ನು ಶರಣಪ್ರಕಾಶ ಪಾಟೀಲ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ಹೆಚ್ಚು ಮಾಹಿತಿ ಇರುವುದಿಲ್ಲ. ನೀವೆಲ್ಲ ಹೋಗಿ ಕೇಳಿದಾಗ ಹೇಳಿರುತ್ತಾರೆ. ಅದು ಅಧಿಕೃತ ಅಂತ ಅನ್ನಿಸುವುದಿಲ್ಲ. ಅವರ ದೃಷ್ಟಿಕೋನದಲ್ಲಿ ಅವರು ಹೇಳಿರುತ್ತಾರೆ. ನಾವು ಅನೇಕ ಮಾಹಿತಿಯನ್ನು ಇಟ್ಟುಕೊಂಡು ಹೇಳಿರುತ್ತೇವೆ. ನಾನು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಹೇಳಿದಾಗ ಜವಾಬ್ದಾರಿಯಿಂದ ಹೇಳಿರುತ್ತೇವೆ‌. ಎಲ್ಲರಿಗೂ ವಿನಂತಿ ಮಾಡಿಕೊಳ್ಳುತ್ತೇನೆ, ಮುಖ್ಯಮಂತ್ರಿಗಳು, ನಾನು ಅಥವಾ ಗೃಹ ಇಲಾಖೆ ಹೇಳಿದರೇ ಮಾತ್ರ ಅಧಿಕೃತ ಹೇಳಿಕೆ ಅಂತ ಪರಿಗಣಸಿಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:13 am, Sun, 3 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್