AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರಸ್ತಿ ಮಾಡಿ ಕೇವಲ 48 ಗಂಟೆಗಳಲ್ಲೇ ಹಾಳಾದ ಬೆಂಗಳೂರಿನ ರಸ್ತೆ; ವೀಡಿಯೋ ವೈರಲ್

ಬೆಂಗಳೂರಿನ ಚನ್ನಸಂದ್ರ ಸರ್ಕಲ್ ಬಳಿಯ ರಸ್ತೆಯನ್ನು ಸೆಪ್ಟೆಂಬರ್ 27 ರಂದು ದುರಸ್ತಿ ಮಾಡಲಾಗಿತ್ತು. ದುರಸ್ತಿ ಮಾಡಿ ಕೇವಲ 2 ದಿನಗಳಲ್ಲಿ ಈ ರಸ್ತೆಯು ಮತ್ತೆ ಯಥಾ ಸ್ಥಿತಿಗೆ ಬಂದಿದೆ. ಈ ಕುರಿತಾಗಿ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸ್ಥಳೀಯ ನಿವಾಸಿಯೊಬ್ಬರು ಈ ದುರವಸ್ಥೆಯ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಹೆಚ್ಚು ವೈರಲ್ ಆಗಿದೆ.

ದುರಸ್ತಿ ಮಾಡಿ ಕೇವಲ 48 ಗಂಟೆಗಳಲ್ಲೇ ಹಾಳಾದ ಬೆಂಗಳೂರಿನ ರಸ್ತೆ; ವೀಡಿಯೋ ವೈರಲ್
ಚನ್ನಸಂದ್ರ ಸರ್ಕಲ್​ನಲ್ಲಿ ಹಾಳಾಗಿರುವ ರಸ್ತೆ
ಭಾವನಾ ಹೆಗಡೆ
|

Updated on: Sep 30, 2025 | 3:17 PM

Share

ಬೆಂಗಳೂರು, ಸೆಪ್ಟೆಂಬರ್ 30:  ಎರಡು ದನಗಳ ಹಿಂದೆಯಷ್ಟೇ ದುರಸ್ತಿ ಮಾಡಲ್ಪಟ್ಟಿದ್ದ ಚನ್ನಸಂದ್ರ ರಸ್ತೆಯು ಈಗಾಗಲೇ ಮತ್ತೆ ಹದಗೆಟ್ಟಿದೆ. ಬೆಂಗಳೂರಿನ (Bengaluru) ರಸ್ತೆ ದುರಸ್ತಿಯು ಹೀನಾಯವಾಗಿ ಸೋಲು ಕಂಡಿದೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಈ ಹೇಳಿಕೆಗೆ ಪುಷ್ಟಿ ನೀಡುವಂತೆ ಚನ್ನಸಂದ್ರ ರಸ್ತೆಯ ಒಂದು ವೀಡಿಯೋ ಈಗ ವೈರಲ್​ ಆಗುತ್ತಿದೆ.

ಚನ್ನಸಂದ್ರ ಸರ್ಕಲ್ ಬಳಿಯ ರಸ್ತೆಯನ್ನು ಸೆಪ್ಟೆಂಬರ್ 27 ರಂದು ದುರಸ್ತಿ ಮಾಡಲಾಗಿತ್ತು ಆದರೆ ಕೇವಲ 48 ಗಂಟೆಗಳಲ್ಲಿಯೇ ಸರಿಪಡಿಸಿದ ಈ ರಸ್ತೆ ಕುಸಿದಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವೈರಲ್ ವೀಡಿಯೋ ಇಲ್ಲಿದೆ

ಈ ವೀಡಿಯೋದಲ್ಲಿ ತೇಪೆ ಹಾಕಿದ  ರಸ್ತೆ ಮೇಲ್ಮೈ  ಕುಸಿಯುತ್ತಿರುವುದನ್ನು ತೋರಿಸಲಾಗಿದೆ. ನೀರು ಸಂಗ್ರಹವಾಗುವುದು ಮತ್ತು ಸೋರಿಕೆಯಾಗುತ್ತಿರುವುದು ಇಲ್ಲಿ ಗೋಚರಿಸುತ್ತಿದೆ. “ಈ ತೇಪೆ ಕೆಲಸವು ಒಂದು ಮಳೆಯ ಅವಧಿಗೂ ಉಳಿಯುವುದಿಲ್ಲ” ಎಂದು ಆರೋಪಿಸಿರುವ ನಿವಾಸಿಯು ತಮ್ಮ ಪೋಸ್ಟ್‌ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (@GBA_office) ಟ್ಯಾಗ್ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ