AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರಸ್ತಿ ಮಾಡಿ ಕೇವಲ 48 ಗಂಟೆಗಳಲ್ಲೇ ಹಾಳಾದ ಬೆಂಗಳೂರಿನ ರಸ್ತೆ; ವೀಡಿಯೋ ವೈರಲ್

ಬೆಂಗಳೂರಿನ ಚನ್ನಸಂದ್ರ ಸರ್ಕಲ್ ಬಳಿಯ ರಸ್ತೆಯನ್ನು ಸೆಪ್ಟೆಂಬರ್ 27 ರಂದು ದುರಸ್ತಿ ಮಾಡಲಾಗಿತ್ತು. ದುರಸ್ತಿ ಮಾಡಿ ಕೇವಲ 2 ದಿನಗಳಲ್ಲಿ ಈ ರಸ್ತೆಯು ಮತ್ತೆ ಯಥಾ ಸ್ಥಿತಿಗೆ ಬಂದಿದೆ. ಈ ಕುರಿತಾಗಿ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸ್ಥಳೀಯ ನಿವಾಸಿಯೊಬ್ಬರು ಈ ದುರವಸ್ಥೆಯ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಹೆಚ್ಚು ವೈರಲ್ ಆಗಿದೆ.

ದುರಸ್ತಿ ಮಾಡಿ ಕೇವಲ 48 ಗಂಟೆಗಳಲ್ಲೇ ಹಾಳಾದ ಬೆಂಗಳೂರಿನ ರಸ್ತೆ; ವೀಡಿಯೋ ವೈರಲ್
ಚನ್ನಸಂದ್ರ ಸರ್ಕಲ್​ನಲ್ಲಿ ಹಾಳಾಗಿರುವ ರಸ್ತೆ
ಭಾವನಾ ಹೆಗಡೆ
|

Updated on: Sep 30, 2025 | 3:17 PM

Share

ಬೆಂಗಳೂರು, ಸೆಪ್ಟೆಂಬರ್ 30:  ಎರಡು ದನಗಳ ಹಿಂದೆಯಷ್ಟೇ ದುರಸ್ತಿ ಮಾಡಲ್ಪಟ್ಟಿದ್ದ ಚನ್ನಸಂದ್ರ ರಸ್ತೆಯು ಈಗಾಗಲೇ ಮತ್ತೆ ಹದಗೆಟ್ಟಿದೆ. ಬೆಂಗಳೂರಿನ (Bengaluru) ರಸ್ತೆ ದುರಸ್ತಿಯು ಹೀನಾಯವಾಗಿ ಸೋಲು ಕಂಡಿದೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಈ ಹೇಳಿಕೆಗೆ ಪುಷ್ಟಿ ನೀಡುವಂತೆ ಚನ್ನಸಂದ್ರ ರಸ್ತೆಯ ಒಂದು ವೀಡಿಯೋ ಈಗ ವೈರಲ್​ ಆಗುತ್ತಿದೆ.

ಚನ್ನಸಂದ್ರ ಸರ್ಕಲ್ ಬಳಿಯ ರಸ್ತೆಯನ್ನು ಸೆಪ್ಟೆಂಬರ್ 27 ರಂದು ದುರಸ್ತಿ ಮಾಡಲಾಗಿತ್ತು ಆದರೆ ಕೇವಲ 48 ಗಂಟೆಗಳಲ್ಲಿಯೇ ಸರಿಪಡಿಸಿದ ಈ ರಸ್ತೆ ಕುಸಿದಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವೈರಲ್ ವೀಡಿಯೋ ಇಲ್ಲಿದೆ

ಈ ವೀಡಿಯೋದಲ್ಲಿ ತೇಪೆ ಹಾಕಿದ  ರಸ್ತೆ ಮೇಲ್ಮೈ  ಕುಸಿಯುತ್ತಿರುವುದನ್ನು ತೋರಿಸಲಾಗಿದೆ. ನೀರು ಸಂಗ್ರಹವಾಗುವುದು ಮತ್ತು ಸೋರಿಕೆಯಾಗುತ್ತಿರುವುದು ಇಲ್ಲಿ ಗೋಚರಿಸುತ್ತಿದೆ. “ಈ ತೇಪೆ ಕೆಲಸವು ಒಂದು ಮಳೆಯ ಅವಧಿಗೂ ಉಳಿಯುವುದಿಲ್ಲ” ಎಂದು ಆರೋಪಿಸಿರುವ ನಿವಾಸಿಯು ತಮ್ಮ ಪೋಸ್ಟ್‌ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (@GBA_office) ಟ್ಯಾಗ್ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್