ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಕೊಚ್ಚಿ ಕೊಂದ್ರು!

ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ ಪವನ್ ಕುಮಾರ್ ಎನ್ನುವಾತನಿಗೆ ಪೋಷಕರು ಬೇಕರಿ ಅಂಗಡಿ ಮಾಡಿಕೊಟ್ಟಿದ್ದರು. ಹೀಗಾಗಿ ಎಲ್ಲಾ ಬಿಟ್ಟು ಬೇಕರಿ ನಡೆಸಿಕೊಂಡು ಹೋಗುತ್ತಿದ್ದವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಕೊಚ್ಚಿ ಕೊಂದ್ರು!
Dcp Mithun
Edited By:

Updated on: Feb 26, 2026 | 3:29 PM

ಬೆಂಗಳೂರು, (ಫೆಬ್ರವರಿ 26): ರೌಡಿಶೀಟರ್ ಪವನ್ ಕುಮಾರ್‌ನನ್ನು (Rowdy sheeter Pawan Kumar)  ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೂರು ಬೈಕ್‌ಗಳಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ಆರು ಮಂದಿ ದುಷ್ಕರ್ಮಿಗಳು, ಪವನ್ ಕುಮಾರ್ ಮನೆ ಬಳಿ ದಾಳಿ ನಡೆಸಿದ್ದಾರೆ. ಪವನ್ ಮನೆಗೆ ಬಂದು ನಿಂತ ಕ್ಷಣದಲ್ಲೇ, ಆತನ ಹೆತ್ತ ತಾಯಿಯ ಕಣ್ಣೆದುರಿನಲ್ಲೇ ಮಾರಕಾಸ್ತ್ರಗಳಿಂದ ಮನಬಂದತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇನ್ನು ಹೆತ್ತ ಮಗನನ್ನು ರಕ್ಷಿಸಲು ತಾಯಿ ಮುಂದಾಗಿದ್ದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?

ರಿವೇಂಜ್ ಗೆ ನಡೀತಾ ಪವನ್ ಮರ್ಡರ್?

ಕಳೆದ ಮೂರು ವರ್ಷದ ಹಿಂದೆ ಡಿಜೆ ಹಳ್ಳಿಯ ಕಪಿಲ ಎಂಬಾತನ ಕೊಲೆ ನಡೆದಿತ್ತು. ಜುಲೈ 11 ,2023 ರಲ್ಲಿ ಕಪಿಲ ಎಂಬಾತನನ್ನು ಡಿಜೆ ಹಳ್ಳಿ ಬಳಿ ಹತ್ಯೆಯಾಗಿತ್ತು. ಅದೇ ಕೇಸ್ ನಲ್ಲಿ ಮೃತ ಪವನ್ ಕುಮಾರ್ A5 ಆರೋಪಿ ಆಗಿದ್ದ. ಕಪಿಲನ ಕೊಲೆ ಮಾಡಿದಾಗಲೂ ಮುಖ ತೋರಿಸದೆ ಹೆಲ್ಮೆಟ್ ಹಾಕಿಕೊಂಡು ಬಂದು 6 ಜನ ಕೊಚ್ಚಿ ಕೊಲೆ ಮಾಡಿದ್ದರು.ಅದೇ ಮಾದರಿಯಲ್ಲಿ ಬಂದು ಪವನ್ ಕುಮಾರ್ ಕೊಚ್ಚಿ ಕೊಲೆ ಮಾಡಲಾಗಿದೆ. ಕಪಿಲನ ತಮ್ಮ ಪ್ರೇಮ್ ಸೇರಿದಂತೆ ಹಲವರ ಮೇಲೆ ಅನುಮಾನವಿದ್ದು,ಪ್ರೇಮ್ ಫಾಲೋ ಮಾಡ್ತಿದ್ದಾನೆ ಎಂದು ತಾಯಿ ಬಳಿ ಪವನ್ ಹೇಳಿಕೊಂಡಿದ್ದ. ಹೀಗಾಗಿ ರಿವೆಂಜ್ ಗಾಗಿ ಅದೇ ಮಾದರಿಯಲ್ಲಿ ಪವನ್ ಕುಮಾರ್ ಕೊಲೆ ನಡೆಯಿತಾ ಎಂಬ ಅನುಮಾನ ಬಲವಾಗಿದೆ.

ಈಶಾನ್ಯ ವಿಭಾಗದ ಡಿಸಿಪಿ ಹೇಳಿದ್ದೇನು?


ಇನ್ನು ಪವನ್ ಹತ್ಯೆ ಪ್ರಕರಣದ ಬಗ್ಗೆ ಈಶಾನ್ಯ ವಿಭಾಗದ ಡಿಸಿಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪವನ್ ಎಂಬಾತನನ್ನ ಆತನ ಮನೆಗೆ ಬರುವಾಗ ಫಾಲೋ ಮಾಡಿದ್ದಾರೆ. ಒಟ್ಟು ಐದು ಜನ ಫಾಲೋ ಮಾಡ್ಕೊಂಡು ಬಂದಿದ್ದರು. ಮನೆ ಬಳಿ ಆತ ಗಾಡಿ ನಿಲ್ಲಿಸುತ್ತಿದ್ದಂತೆಯೇ ಹಿಂದೆಯಿಂದ ಅಟ್ಯಾಕ್ ಮಾಡಿದ್ದಾರೆ. ಕೊಲೆ ಮಾಡಿದವರ ಗುರುತು ಪತ್ತೆ ಮಾಡಲಾಗಿದೆ. ಹಳೇ ದ್ವೇಷಕ್ಕೆ ಕೊಲೆ ಆಗಿದೆ ಎಂದು ಈಗಲೇ ಹೇಳೋದು ಸರಿಯಲ್ಲ. ಆರೋಪಿಗೆ ಅಪರಾಧ ಹಿನ್ನೆಲೆ ಇತ್ತು. ಸದ್ಯ ಆರೋಪಿಗಳನ್ನ ಹುಡುಕುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

Published On - 3:17 pm, Thu, 26 February 26

Follow Us