AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಬೈರತಿ ಬಸವರಾಜ್​​ ಗೆ ಸಂಕಷ್ಟ ತಂದಿಟ್ಟ ಬಿಕ್ಲು ಶಿವ ಕೊಲೆ ಪ್ರಕರಣ ಸಿಐಡಿ ಹೆಗಲಿಗೆ

ಬೆಂಗಳೂರಿನ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೊಲೆ ಪ್ರಕರಣದಲ್ಲಿ A5 ಆಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಪೊಲೀಸರು ಸಾಕ್ಷ್ಯ ಪತ್ತೆಗೆ ಮುಂದಾಗಿದ್ದಾರೆ. ಇದರ ನಡುವೆ ಬಿಕ್ಲು ಶಿವ ಕೊಲೆ ಪ್ರಕರಣದ ಎ1 ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಮತ್ತೊಂದೆಡೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಬೈರತಿ ಬಸವರಾಜ್​​ ಗೆ ಸಂಕಷ್ಟ ತಂದಿಟ್ಟ ಬಿಕ್ಲು ಶಿವ ಕೊಲೆ ಪ್ರಕರಣ ಸಿಐಡಿ ಹೆಗಲಿಗೆ
Biklu Shiva
ಶಿವಪ್ರಸಾದ್​ ಬಿ.
| Edited By: |

Updated on: Jul 24, 2025 | 6:01 PM

Share

ಬೆಂಗಳೂರು, (ಜುಲೈ 24): ರೌಡಿ ಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಬಿಕ್ಲು ಶಿವ ಕೊಲೆಯಾಗಲು ಪ್ರಮುಖ ಕಾರಣ ಏನು ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕೊಲೆಗೆ ಸುಪಾರಿ ಪಡೆದಿದ್ದ ಗ್ಯಾಂಗ್​ ಅನ್ನೂ ಬಲೆಗೆ ಕೆಡವಿದ್ದಾರೆ. ಇದರ ಬೆನ್ನಲ್ಲೇ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಇಂದು (ಜುಲೈ 24) ಆದೇಶ ಹೊರಡಿಸಿದೆ.

ಎ1 ಆರೋಪಿಯ ಜಾಮೀನು ಅರ್ಜಿ ವಜಾ

ಇನ್ನು ಈ ಪ್ರಕರಣದ ಎ1 ಆರೋಪಿಯಾಗಿರುವ ಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂದು ಹೇಳಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು! ಮತ್ತಷ್ಟು ರೋಚಕ ಅಂಶ ಬಯಲು

ಪ್ರಮುಖ ಆರೋಪಿ ದುಬೈಗೆ ಪರಾರಿ

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ ತಂದಿರುವ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ದುಬೈಗೆ ಪಲಾಯನ ಮಾಡಿದ್ದಾನೆ. ಶಿವಪ್ರಕಾಶ್‌ ಅಲಿಯಾಸ್‌‍ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದೇ ಶಂಕಿಸಲಾಗಿರುವ ಜಗದೀಶ್‌ ಅಲಿಯಾಸ್‌‍ ಜಗ್ಗ ಅಂದು ಶಿವನ ಕೊಲೆ ನಡೆದ ನಂತರ ಯಾರಿಗೂ ತಿಳಿಯದಂತೆ ದುಬೈಗೆ ಪರಾರಿಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಇದನ್ನೂ ಓದಿ
Image
ಬಿಕ್ಲು ಶಿವ ಕೊಲೆ ಕೇಸ್: ಬಗೆದಷ್ಟು ಸ್ಫೋಟಕ ಮಾಹಿತಿ, ನಟ-ನಟಿಯರ ಜತೆಗೂ ನಂಟು
Image
ಬಿಕ್ಲು ಶಿವ ಕೊಲೆ ಕೇಸ್: ಇಬ್ರು ಬಂಧನ, ಭೈರತಿ ಬಸವರಾಜ್ ಸಹೋದರನ ಮಗ ವಶಕ್ಕೆ
Image
ಬಿಜೆಪಿ ಎಂಎಲ್​​ಎಗೆ ನೋಟಿಸ್, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮೃತನ ತಾಯಿ
Image
ರೌಡಿಶೀಟರ್​ ಕೊಲೆ: ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್​ಐಆರ್​

ರೌಡಿ ಶೀಟರ್ ಬಿಕ್ಲು ಶಿವನನ್ನು ಕೊಲೆ ಮಾಡಲು ಕೇವಲ ಒಂದೂವರೆ ಲಕ್ಷ ರೂಪಾಯಿ ಸುಪಾರಿ ಪಡೆದಿದ್ದ ಗ್ಯಾಂಗ್​ ಅಂದರ್ ಆಗಿದೆ. ಕೋಲಾರದ ಮಾಲೂರು ಮೂಲದ ನರಸಿಂಹ, ಮುರುಗೇಶ್, ಸುದರ್ಶನ, ಅವಿನಾಶ್ ದಿನ್ನಹಳ್ಳಿ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧಿತನಾಗಿರುವ ವಿಮಲ್ ಎಂಬ ಆರೋಪಿ ಮೂಲಕ ನರಸಿಂಹನಿಗೆ ಸುಪಾರಿ ನೀಡಲಾಗಿತ್ತು ಎಂಬ ಅಂಶ ಬಯಲಾಗಿದೆ. ಇಷ್ಟೇ ಅಲ್ಲ ಕೊಲೆಗೆ ಬಳಸಿದ್ದಸ್ಕಾರ್ಪಿಯೋ ಕಾರನ್ನು ಎರಡೂವರೆ ಲಕ್ಷ ರೂಪಾಯಿ ಕೊಟ್ಟು ರೆಡ್ಡಿ ಎಂಬುವವರ ಬಳಿ ಕನ್ನಡಪರ ಹೋರಾಟಗಾರ ಕಂ ನಟ ಆರ್.ಡಿ ಅನಿಲ್ ಖರೀದಿ ಮಾಡಿ ಕಿರಣ್​ಗೆ ಕೊಟ್ಟಿದ್ದ ಎನ್ನಲಾಗಿದೆ. 

ಇನ್ನು ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಕಿರಣ್​ಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್​ಮೆಂಟ್ ನೀಡಿರುವುದು ಕಂಡುಬಂದ ಹಿನ್ನೆಲೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಮತ್ತು ವರದಿಯೊಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!