Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರ್​​ಟಿ ನಗರದ ಈ ರಸ್ತೆಯಿಂದ ಮೂವರಿಗೆ ಕರ್ನಾಟಕದ ಮುಖ್ಯಮಂತ್ರಿ ಭಾಗ್ಯ! ಏನಿದು ವಾಸ್ತು ಲೆಕ್ಕಾಚಾರ?

Bengaluru News: ಆರ್​ಟಿ ನಗರದ ಒಂದೇ ಬೀದಿಯಲ್ಲಿರುವ ಮೂವರು ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಸ್​.ಆರ್. ಬೊಮ್ಮಾಯಿ, ವೀರಪ್ಪ ಮೊಯ್ಲಿ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಮನೆಗಳು ಇದೇ ಬೀದಿಯಲ್ಲಿವೆ.

ಬೆಂಗಳೂರಿನ ಆರ್​​ಟಿ ನಗರದ ಈ ರಸ್ತೆಯಿಂದ ಮೂವರಿಗೆ ಕರ್ನಾಟಕದ ಮುಖ್ಯಮಂತ್ರಿ ಭಾಗ್ಯ! ಏನಿದು ವಾಸ್ತು ಲೆಕ್ಕಾಚಾರ?
ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 29, 2021 | 12:42 PM

ಬೆಂಗಳೂರು: ಕೆಲವರು ಅದರಲ್ಲೂ ರಾಜಕಾರಣಿಗಳಿಗೆ ಜ್ಯೋತಿಷ್ಯ, ವಾಸ್ತು ಬಗ್ಗೆ ಭಾರೀ ನಂಬಿಕೆ ಇರುತ್ತದೆ. ಪ್ರಧಾನಿಗಳಿಂದ ಹಿಡಿದು ತಳಮಟ್ಟದ ನಾಯಕರವರೆಗೂ ರಾಹುಕಾಲ, ಕಚೇರಿಯ ವಾಸ್ತು, ಜ್ಯೋತಿಷ್ಯಕ್ಕೆ ಭಾರೀ ಪ್ರಾಮುಖ್ಯತೆ ನೀಡುತ್ತಾರೆ. ಅದೇ ರೀತಿಯ ಆರ್​.ಟಿ. ನಗರದ ಈ ಒಂದು ರಸ್ತೆಯ ತಿರುವು ರಾಜ್ಯ ರಾಜಕಾರಣದಲ್ಲಿ ಬಹಳ ಮಹತ್ವ ಹೊಂದಿದೆ. ಇದೇ ಆರ್​ಟಿ ನಗರದ ಮೂವರು ರಾಜಕಾರಣಿಗಳು ಕರ್ನಾಟಕದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅಲ್ಲದೆ, ಈ ರಸ್ತೆಯಲ್ಲಿ ರಾಜ್ಯದ ಘಟಾನುಘಟಿ ನಾಯಕರು ವಾಸವಾಗಿದ್ದಾರೆ. ಇದು ಅನಿರೀಕ್ಷಿತವೋ, ವಾಸ್ತು ಪರಿಣಾಮವೋ ಎಂಬುದನ್ನು ಹೇಳಲಾಗದು. 

ಈ ಮಾಹಿತಿ ಈಗ ಟ್ವಿಟ್ಟರ್​ನಲ್ಲಿ ಹರಿದಾಡುತ್ತಿದೆ. ಆರ್​ಟಿ ನಗರದ ಒಂದೇ ಬೀದಿಯಲ್ಲಿರುವ ಮೂವರು ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಸ್​.ಆರ್. ಬೊಮ್ಮಾಯಿ, ವೀರಪ್ಪ ಮೊಯ್ಲಿ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಮನೆಗಳು ಇದೇ ಬೀದಿಯಲ್ಲಿವೆ. ಹಾಗಾಗಿ, ಮುಖ್ಯಮಂತ್ರಿ ಪಟ್ಟಕ್ಕೇರಲು ವಾಸ್ತುವೂ ಕಾರಣವಿರಬಹುದು ಎಂದು ಅನಿಲ್ ಲುಲ್ಲಾ ಎಂಬುವವರ ಟ್ವೀಟ್ ಮಾಡಿದ್ದಾರೆ.

‘ತಿರುವಿನಲ್ಲಿ ಮನೆಯಿದ್ದರೆ ವಾಸ್ತು ಪ್ರಕಾರ ಒಳ್ಳೆಯದೋ, ಕೆಟ್ಟದ್ದೋ ನನಗೆ ಗೊತ್ತಿಲ್ಲ. ಆದರೆ, ಆರ್​ಟಿ ನಗರದ ಇದೊಂದು ಬೀದಿಯಲ್ಲಿ ವಾಸವಾಗಿದ್ದ ಮೂವರು ಈ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಎಸ್​.ಆರ್. ಬೊಮ್ಮಾಯಿ, ವೀರಪ್ಪ ಮೊಯ್ಲಿ ಹಾಗೂ ಬಸವರಾಜ ಬೊಮ್ಮಾಯಿಯನ್ನು ಕರ್ನಾಟಕದ ಮುಖ್ಯಮಂತ್ರಿಯಾಗಿ ಈ ಬೀದಿ ಕೊಟ್ಟಿದೆ. ಇನ್ನೊಂದು ವಿಶೇಷವಾದ ವಿಚಾರವೆಂದರೆ ಈ ರಸ್ತೆಯ ತುದಿಯಲ್ಲಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಸೇರಿದಂತೆ ಕೆಲವು ಸಂಪಾದಕರ ಮನೆಗಳೂ ಇವೆ’ ಎಂದು ಅನಿಲ್ ಲುಲ್ಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Karnataka Breaking News LIVE: ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್​​ಗೆ ಇಳಿದಿದ್ದಾರೆ?

(Bengaluru RT Nagar Street have Given 3 Chief Ministers to Karnataka including Basavaraj Bommai)

Published On - 12:32 pm, Thu, 29 July 21

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್