AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರ್​​ಟಿ ನಗರದ ಈ ರಸ್ತೆಯಿಂದ ಮೂವರಿಗೆ ಕರ್ನಾಟಕದ ಮುಖ್ಯಮಂತ್ರಿ ಭಾಗ್ಯ! ಏನಿದು ವಾಸ್ತು ಲೆಕ್ಕಾಚಾರ?

Bengaluru News: ಆರ್​ಟಿ ನಗರದ ಒಂದೇ ಬೀದಿಯಲ್ಲಿರುವ ಮೂವರು ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಸ್​.ಆರ್. ಬೊಮ್ಮಾಯಿ, ವೀರಪ್ಪ ಮೊಯ್ಲಿ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಮನೆಗಳು ಇದೇ ಬೀದಿಯಲ್ಲಿವೆ.

ಬೆಂಗಳೂರಿನ ಆರ್​​ಟಿ ನಗರದ ಈ ರಸ್ತೆಯಿಂದ ಮೂವರಿಗೆ ಕರ್ನಾಟಕದ ಮುಖ್ಯಮಂತ್ರಿ ಭಾಗ್ಯ! ಏನಿದು ವಾಸ್ತು ಲೆಕ್ಕಾಚಾರ?
ಬಸವರಾಜ ಬೊಮ್ಮಾಯಿ
TV9 Web
| Edited By: ಸಾಧು ಶ್ರೀನಾಥ್​|

Updated on:Jul 29, 2021 | 12:42 PM

Share

ಬೆಂಗಳೂರು: ಕೆಲವರು ಅದರಲ್ಲೂ ರಾಜಕಾರಣಿಗಳಿಗೆ ಜ್ಯೋತಿಷ್ಯ, ವಾಸ್ತು ಬಗ್ಗೆ ಭಾರೀ ನಂಬಿಕೆ ಇರುತ್ತದೆ. ಪ್ರಧಾನಿಗಳಿಂದ ಹಿಡಿದು ತಳಮಟ್ಟದ ನಾಯಕರವರೆಗೂ ರಾಹುಕಾಲ, ಕಚೇರಿಯ ವಾಸ್ತು, ಜ್ಯೋತಿಷ್ಯಕ್ಕೆ ಭಾರೀ ಪ್ರಾಮುಖ್ಯತೆ ನೀಡುತ್ತಾರೆ. ಅದೇ ರೀತಿಯ ಆರ್​.ಟಿ. ನಗರದ ಈ ಒಂದು ರಸ್ತೆಯ ತಿರುವು ರಾಜ್ಯ ರಾಜಕಾರಣದಲ್ಲಿ ಬಹಳ ಮಹತ್ವ ಹೊಂದಿದೆ. ಇದೇ ಆರ್​ಟಿ ನಗರದ ಮೂವರು ರಾಜಕಾರಣಿಗಳು ಕರ್ನಾಟಕದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅಲ್ಲದೆ, ಈ ರಸ್ತೆಯಲ್ಲಿ ರಾಜ್ಯದ ಘಟಾನುಘಟಿ ನಾಯಕರು ವಾಸವಾಗಿದ್ದಾರೆ. ಇದು ಅನಿರೀಕ್ಷಿತವೋ, ವಾಸ್ತು ಪರಿಣಾಮವೋ ಎಂಬುದನ್ನು ಹೇಳಲಾಗದು. 

ಈ ಮಾಹಿತಿ ಈಗ ಟ್ವಿಟ್ಟರ್​ನಲ್ಲಿ ಹರಿದಾಡುತ್ತಿದೆ. ಆರ್​ಟಿ ನಗರದ ಒಂದೇ ಬೀದಿಯಲ್ಲಿರುವ ಮೂವರು ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಸ್​.ಆರ್. ಬೊಮ್ಮಾಯಿ, ವೀರಪ್ಪ ಮೊಯ್ಲಿ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಮನೆಗಳು ಇದೇ ಬೀದಿಯಲ್ಲಿವೆ. ಹಾಗಾಗಿ, ಮುಖ್ಯಮಂತ್ರಿ ಪಟ್ಟಕ್ಕೇರಲು ವಾಸ್ತುವೂ ಕಾರಣವಿರಬಹುದು ಎಂದು ಅನಿಲ್ ಲುಲ್ಲಾ ಎಂಬುವವರ ಟ್ವೀಟ್ ಮಾಡಿದ್ದಾರೆ.

‘ತಿರುವಿನಲ್ಲಿ ಮನೆಯಿದ್ದರೆ ವಾಸ್ತು ಪ್ರಕಾರ ಒಳ್ಳೆಯದೋ, ಕೆಟ್ಟದ್ದೋ ನನಗೆ ಗೊತ್ತಿಲ್ಲ. ಆದರೆ, ಆರ್​ಟಿ ನಗರದ ಇದೊಂದು ಬೀದಿಯಲ್ಲಿ ವಾಸವಾಗಿದ್ದ ಮೂವರು ಈ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಎಸ್​.ಆರ್. ಬೊಮ್ಮಾಯಿ, ವೀರಪ್ಪ ಮೊಯ್ಲಿ ಹಾಗೂ ಬಸವರಾಜ ಬೊಮ್ಮಾಯಿಯನ್ನು ಕರ್ನಾಟಕದ ಮುಖ್ಯಮಂತ್ರಿಯಾಗಿ ಈ ಬೀದಿ ಕೊಟ್ಟಿದೆ. ಇನ್ನೊಂದು ವಿಶೇಷವಾದ ವಿಚಾರವೆಂದರೆ ಈ ರಸ್ತೆಯ ತುದಿಯಲ್ಲಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಸೇರಿದಂತೆ ಕೆಲವು ಸಂಪಾದಕರ ಮನೆಗಳೂ ಇವೆ’ ಎಂದು ಅನಿಲ್ ಲುಲ್ಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Karnataka Breaking News LIVE: ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್​​ಗೆ ಇಳಿದಿದ್ದಾರೆ?

(Bengaluru RT Nagar Street have Given 3 Chief Ministers to Karnataka including Basavaraj Bommai)

Published On - 12:32 pm, Thu, 29 July 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ