AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ಭದ್ರತೆ ಬೇಕು: ಕುಮಾರಸ್ವಾಮಿ ಬೇಡಿಕೆ, ಕೊಟ್ಟ ಕಾರಣ ಇಲ್ಲಿದೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಪಾರದರ್ಶಕವಾಗಿ ನಡೆಯುವ ಬಗ್ಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನವರು ಪೊಲೀಸ್ ದಬ್ಬಾಳಿಕೆ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಕ್ಷೇತ್ರದಲ್ಲಿ ಭದ್ರತೆಗೆ ಹರಿಸೇನಾಪಡೆ ಕಳುಹಿಸಬೇಕು ಎಂದು ಕೇಂದ್ರಕ್ಕೆ ಬೇಡಿಕೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ಭದ್ರತೆ ಬೇಕು: ಕುಮಾರಸ್ವಾಮಿ ಬೇಡಿಕೆ, ಕೊಟ್ಟ ಕಾರಣ ಇಲ್ಲಿದೆ
ಪತ್ರಿಕಾಗೋಷ್ಠಿಯಲ್ಲಿ ನಿಖಿಲ್ ಕುಮಾರಸ್ವಾಮಿ ಜತೆ ಹೆಚ್​ಡಿ ಕುಮಾರಸ್ವಾಮಿ
ಗಣಪತಿ ಶರ್ಮಾ
|

Updated on: Mar 19, 2024 | 1:54 PM

Share

ಬೆಂಗಳೂರು, ಮಾರ್ಚ್​ 19: ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್​ ಮಂಜುನಾಥ್ (Dr CN Manjunath) ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅರೆಸೇನಾ ಪಡೆ ಭದ್ರತೆ ಒದಗಿಸಬೇಕು ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹಾಗೂ ಮಂಜುನಾಥ್ ನಡುವಣ ಸ್ಪರ್ಧೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಈಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಈ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಹೃದಯದ ಚಿಕಿತ್ಸೆಗಾಗಿ ಚೆನ್ನೈಗೆ ತೆರಳುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆ ಭದ್ರತೆಗಾಗಿ ಪ್ಯಾರಾ ಮಿಲಿಟರಿ ಫೋರ್ಸ್ ನಿಯೋಜಿಸುವಂತೆ ಕೇಂದ್ರ ಸರ್ಕಾರದ ಬಳಿ ಬೇಡಿಕೆ ಇಡುತ್ತೇನೆ. ಇಲ್ಲ ಅಂದರೆ ಈ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯಲಾರದು ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಕಾಂಗ್ರೆಸ್ ಪಕ್ಷದಿಂದ ಸೀರೆ, ಕುಕ್ಕರ್ ಹಂಚಿಕೆ ನಡೆದಿದೆ. ಹಣ ಮತ್ತು ತೋಳ್ಬಲದಿಂದ ಚುನಾವಣೆಗೆಲ್ಲಲು ಡಿಕೆ ಸಹೋದರರು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಡಿಕೆ ಸಹೋದರರ ಈ ತಂತ್ರಗಳಿಗೆಲ್ಲ ನಾವು ಹೆದರುವುದಿಲ್ಲ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ಪೊಲೀಸ್ ದಬ್ಬಾಳಿಕೆ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 3 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದ ಜೆಡಿಎಸ್​ಗೆ ಬಿಜೆಪಿ ಹೈಕಮಾಂಡ್​ ಹೇಳಿದ್ದೇನು? ಬಹಿರಂಗಪಡಿಸಿದ ಕುಮಾರಸ್ವಾಮಿ

ಡಾ. ಮಂಜುನಾಥ್ ಅವರ ಸ್ಪರ್ಧೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಇದೀಗ ರಾಜ್ಯದ ಗಮನ ಸೆಳೆಯುತ್ತಿದೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದ್ದ ಏಕೈಕ ಕ್ಷೇತ್ರ ಬೆಂಗಳೂರು ಗ್ರಾಮಾಂತರ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಇದು ಬಹಳ ಮುಖ್ಯವಾದ ಕ್ಷೇತ್ರವಾಗಿದೆ. ಮತ್ತೊಂದೆಡೆ, ಡಿಸಿಎಂ ಡಿಕೆ ಶಿವಕುಮಾರ್ ಸಹೋದರನೇ ಸಂಸದನಾಗಿದ್ದು, ಈ ಬಾರಿಯೂ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯು ಮಂಜುನಾಥ್ ಅವರನ್ನು ಕಣಕ್ಕಿಳಿಸಿರುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ.

ಚೆನ್ನೈಗೆ ತೆರಳಿದ ಕುಮಾರಸ್ವಾಮಿ

ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿರುವ ಕುಮಾರಸ್ವಾಮಿ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದರು. ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ತಂದೆ ಹೆಚ್​ಡಿ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರಿಂದ ಆಶೀರ್ವಾದ ಪಡೆದ ಕುಮಾರಸ್ವಾಮಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?