Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ಭದ್ರತೆ ಬೇಕು: ಕುಮಾರಸ್ವಾಮಿ ಬೇಡಿಕೆ, ಕೊಟ್ಟ ಕಾರಣ ಇಲ್ಲಿದೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಪಾರದರ್ಶಕವಾಗಿ ನಡೆಯುವ ಬಗ್ಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನವರು ಪೊಲೀಸ್ ದಬ್ಬಾಳಿಕೆ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಕ್ಷೇತ್ರದಲ್ಲಿ ಭದ್ರತೆಗೆ ಹರಿಸೇನಾಪಡೆ ಕಳುಹಿಸಬೇಕು ಎಂದು ಕೇಂದ್ರಕ್ಕೆ ಬೇಡಿಕೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ಭದ್ರತೆ ಬೇಕು: ಕುಮಾರಸ್ವಾಮಿ ಬೇಡಿಕೆ, ಕೊಟ್ಟ ಕಾರಣ ಇಲ್ಲಿದೆ
ಪತ್ರಿಕಾಗೋಷ್ಠಿಯಲ್ಲಿ ನಿಖಿಲ್ ಕುಮಾರಸ್ವಾಮಿ ಜತೆ ಹೆಚ್​ಡಿ ಕುಮಾರಸ್ವಾಮಿ
Follow us
Ganapathi Sharma
|

Updated on: Mar 19, 2024 | 1:54 PM

ಬೆಂಗಳೂರು, ಮಾರ್ಚ್​ 19: ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್​ ಮಂಜುನಾಥ್ (Dr CN Manjunath) ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅರೆಸೇನಾ ಪಡೆ ಭದ್ರತೆ ಒದಗಿಸಬೇಕು ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹಾಗೂ ಮಂಜುನಾಥ್ ನಡುವಣ ಸ್ಪರ್ಧೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಈಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಈ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಹೃದಯದ ಚಿಕಿತ್ಸೆಗಾಗಿ ಚೆನ್ನೈಗೆ ತೆರಳುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆ ಭದ್ರತೆಗಾಗಿ ಪ್ಯಾರಾ ಮಿಲಿಟರಿ ಫೋರ್ಸ್ ನಿಯೋಜಿಸುವಂತೆ ಕೇಂದ್ರ ಸರ್ಕಾರದ ಬಳಿ ಬೇಡಿಕೆ ಇಡುತ್ತೇನೆ. ಇಲ್ಲ ಅಂದರೆ ಈ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯಲಾರದು ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಕಾಂಗ್ರೆಸ್ ಪಕ್ಷದಿಂದ ಸೀರೆ, ಕುಕ್ಕರ್ ಹಂಚಿಕೆ ನಡೆದಿದೆ. ಹಣ ಮತ್ತು ತೋಳ್ಬಲದಿಂದ ಚುನಾವಣೆಗೆಲ್ಲಲು ಡಿಕೆ ಸಹೋದರರು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಡಿಕೆ ಸಹೋದರರ ಈ ತಂತ್ರಗಳಿಗೆಲ್ಲ ನಾವು ಹೆದರುವುದಿಲ್ಲ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ಪೊಲೀಸ್ ದಬ್ಬಾಳಿಕೆ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 3 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದ ಜೆಡಿಎಸ್​ಗೆ ಬಿಜೆಪಿ ಹೈಕಮಾಂಡ್​ ಹೇಳಿದ್ದೇನು? ಬಹಿರಂಗಪಡಿಸಿದ ಕುಮಾರಸ್ವಾಮಿ

ಡಾ. ಮಂಜುನಾಥ್ ಅವರ ಸ್ಪರ್ಧೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಇದೀಗ ರಾಜ್ಯದ ಗಮನ ಸೆಳೆಯುತ್ತಿದೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದ್ದ ಏಕೈಕ ಕ್ಷೇತ್ರ ಬೆಂಗಳೂರು ಗ್ರಾಮಾಂತರ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಇದು ಬಹಳ ಮುಖ್ಯವಾದ ಕ್ಷೇತ್ರವಾಗಿದೆ. ಮತ್ತೊಂದೆಡೆ, ಡಿಸಿಎಂ ಡಿಕೆ ಶಿವಕುಮಾರ್ ಸಹೋದರನೇ ಸಂಸದನಾಗಿದ್ದು, ಈ ಬಾರಿಯೂ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯು ಮಂಜುನಾಥ್ ಅವರನ್ನು ಕಣಕ್ಕಿಳಿಸಿರುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ.

ಚೆನ್ನೈಗೆ ತೆರಳಿದ ಕುಮಾರಸ್ವಾಮಿ

ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿರುವ ಕುಮಾರಸ್ವಾಮಿ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದರು. ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ತಂದೆ ಹೆಚ್​ಡಿ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರಿಂದ ಆಶೀರ್ವಾದ ಪಡೆದ ಕುಮಾರಸ್ವಾಮಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ