AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ
ಚಿನ್ನ ಸಾಗಾಟ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 05, 2024 | 5:06 PM

Share

ಬೆಂಗಳೂರು ಗ್ರಾಮಾಂತರ, ಜ.05: ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಮಸ್ಕಟ್ ಮತ್ತು ಮದೀನಾದಿಂದ ಕೆಐಎಬಿಗೆ ಬಂದಿದ್ದ ಪ್ರಯಾಣಿಕರು ಇವರಾಗಿದ್ದು,  ಮೈಮೇಲೆ ಬಂಗಾರ ಧರಿಸಿದರೆ ಕೇಳಲ್ಲ ಅಂದುಕೊಂಡಿದ್ದರಂತೆ. ಇದೀಗ ಚಿನ್ನಕ್ಕೆ ಸರಿಯಾದ ಬಿಲ್ ಟ್ಯಾಕ್ಸ್ ಇಲ್ಲದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ.

ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ಮೌಲ್ಯದ ಚಿನ್ನ, ನಗದು ಕದ್ದವನ ಬಂಧನ

ಬೆಳಗಾವಿ: ಮದುವೆ ಮನೆಯಲ್ಲಿ ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕಳ್ಳತನ ಮಾಡಿದವನನ್ನು ಮಾಳ ಮಾರುತಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ವ್ಯಾನಿಟಿ ಬ್ಯಾಗ್​​​ನಲ್ಲಿದ್ದ 3 ಲಕ್ಷದ 51 ಸಾವಿರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ 3,500 ರೂಪಾಯಿಯನ್ನು  ಕಳ್ಳತನ ಮಾಡಿದ್ದ ಖದೀಮನನ್ನು 6 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇಮ್ತಿಯಾಜ್ ಹುಬ್ಳಿವಾಲೆ ಬಂಧಿತ ಆರೋಪಿ.

ಇದನ್ನೂ ಓದಿ:ಚಿನ್ನದ ಕಳ್ಳಸಾಗಣೆ​​ಗೆ ಮತ್ತೊಂದು ಐಡಿಯಾ! ಆದರೆ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನಡೆಯದ ಕಳ್ಳಾಟ

ಇತ ಪಂಚಾಕ್ಷರಿ, ಲತಾ ದಂಪತಿ ಮಕ್ಕಳ ಮದುವೆಗೆ ಹೋಗಿದ್ದ.​​ ಈ ವೇಳೆ ದಂಪತಿ ಚೇರ್​​ ಮೇಲೆ ವ್ಯಾನಿಟಿ ಬ್ಯಾಗ್​​​ ಬಿಟ್ಟು, ನವ ಜೋಡಿಯನ್ನು ಆಶೀರ್ವದಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ವ್ಯಾನಿಟಿ ಬ್ಯಾಗ್​​ ತೆಗೆದುಕೊಂಡು ಇಮ್ತಿಯಾಜ್ ಪರಾರಿಯಾಗಿದ್ದ. ಈ ದೃಶ್ಯ ಕಲ್ಯಾಣ ಮಂಟಪದಲ್ಲಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದನ್ನೇ ಆಧರಿಸಿ ಹುಡುಕಾಟ ಆರಂಭಿಸಿದ ಮಾಳ ಮಾರುತಿ ಪೊಲೀಸರು, ಇದೀಗ ಕೇವಲ 6 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು