AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್​ಮೆಂಟ್​ನಲ್ಲಿ ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ

ಬೆಂಗಳೂರಿನ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದಲ್ಲಿ 3 ಕೋಟಿ ರೂಪಾಯಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಪೊಲೀಸರು ಕೇರಳ ಮೂಲದ ಆರೋಪಿ ಸಚಿನ್​ ನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಬೆಂಗಳೂರು ಪೊಲೀಸರು ಕಳೆದ ಒಂದು ತಿಂಗಳಲ್ಲಿ ಡ್ರಗ್ ಕೇಸ್‌ಗಳಲ್ಲಿ 59 ಜನರನ್ನು ಬಂಧಿಸಿದ್ದಾರೆ ಮತ್ತು ದೊಡ್ಡ ಪ್ರಮಾಣದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಅಪಾರ್ಟ್​ಮೆಂಟ್​ನಲ್ಲಿ ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ
ಅಪಾರ್ಟ್​ಮೆಂಟ್​​ನಲ್ಲಿ ಸಿಕ್ಕ ಗಾಂಜಾ
ರಾಮು, ಆನೇಕಲ್​
| Edited By: |

Updated on: May 09, 2025 | 3:36 PM

Share

ಬೆಂಗಳೂರು, ಮೇ 09: ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಕರ್ಪೂರು ಗ್ರಾಮದಲ್ಲಿನ ಅಪಾರ್ಟ್​ಮೆಂಟ್​ವೊಂದರಲ್ಲಿ 3 ಕೋಟಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಂಗ್ರಹಿಸಿದ್ದ ಕೇರಳ ಮೂಲದ ಆರೋಪಿ ಸಚಿನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಾದ ರಾಶಿ, ಸಂಜು ಮತ್ತು ಉಮೇದ್ ಪರಾರಿಯಾಗಿದ್ದಾರೆ. ಆರೋಪಿ ಸಚಿನ್​ ಕೂಡ ಮೊದಲ ಮಹಡಿಯಿಂದ ಹಾರಿ ಪರಾರಿಯಾಗಲು ಯತ್ನಿಸಿದನು.

ಆದರೆ, ಕಾಲು ಮುರಿದು ಕುಸಿದು ಬಿದ್ದಿದ್ದಾನೆ. ಗಾಯಾಳು ಆರೋಪಿ ಸಚಿನ್​ನನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್ ಠಾಣೆ ಪೊಲೀಸರು ಅಪಾರ್ಟ್​ಮೆಂಟ್​ನಲ್ಲಿ ಶೋಧ ಮುಂದುವರೆಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಿ ಕೆ ಬಾಬಾ, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಗಳು ಹೊರರಾಜ್ಯಗಳಿಂದ ಗಾಂಜಾ ತರಿಸಿ, ಅಪಾರ್ಟ್ಮೆಂಟ್​ನಲ್ಲಿ ಸಣ್ಣ ಸಣ್ಣ ಪ್ಯಾಕೆಟ್​ಗಳಲ್ಲಿ ಪ್ಯಾಕ್ ಮಾಡುತ್ತಿದ್ದರು. ಬಳಿಕ ಆರೋಪಿಗಳು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಇದ್ದ ಕೊಠಡಿಯಲ್ಲಿ ವೇಯಿಂಗ್ ಸ್ಕೇಲ್, ಪ್ಯಾಕಿಂಗ್ ಟೇಪ್, ರಾಶಿ ರಾಶಿ ಗಾಂಜಾ ಪಾಕೇಟ್ಗಳು ಪತ್ತೆಯಾಗಿವೆ.

ಇದನ್ನೂ ಓದಿ
Image
ಸುಳ್ಳು ಸುದ್ದಿಗಳನ್ನ ಹರಡುವವರ ವಿರುದ್ಧ ಕ್ರಮ: ದಯಾನಂದ್ ಎಚ್ಚರಿಕೆ
Image
ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು
Image
ಪಾಕ್​ಗೆ ತೆರಳಲು ಸಮಯ ಕೋರಿದ್ದ ಅರ್ಜಿ ವಜಾ, ಕೋರ್ಟ್ ಹೇಳಿದ್ದೇನು?
Image
ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ

ಡ್ರಗ್​ ಕೇಸ್​ನಲ್ಲಿ 59 ಆರೋಪಿಗಳು ಅರೆಸ್ಟ್​

ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 1 ತಿಂಗಳಲ್ಲಿ ಡ್ರಗ್​ ಕೇಸ್​ನಲ್ಲಿ 59 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಬಳಿ ಇದ್ದ 208 ಕೆಜಿ ಗಾಂಜಾ, 22 ಗ್ರಾಂ ಹೆರಾಯಿನ್, 1 ಕೆಜಿ ಎಂಡಿಎಂಎ, 32 ಟೈಡಲ್ ಮಾತ್ರೆಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಹೈಅಲರ್ಟ್: 3 ಗಂಟೆ ಮುಂಚಿತವಾಗಿ ಬರಲು ಪ್ರಯಾಣಿಕರಿಗೆ ಸೂಚನೆ

ಗ್ಯಾಮ್ಲಿಂಗ್ ಸಂಬಂಧ 55 ಕೇಸ್ ದಾಖಲಿಸಿಕೊಂಡು 205 ಆರೋಪಿಗಳನ್ನು ಬಂಧಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ 23 ಕೇಸ್ ದಾಖಲಿಸಿ 30 ಜನರನ್ನು ಬಂಧಿಸಿದ್ದಾರೆ. ಅಕ್ರಮ ಮಾನವ ಕಳ್ಳಸಾಗಣೆ 8 ಕೇಸ್ ದಾಖಲು, 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ 9 ಮಂದಿ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಹಾಗೇ ವಿವಿಧ ಸೆಕ್ಷನ್ ಅಡಿಯಲ್ಲಿ 1 ತಿಂಗಳಲ್ಲಿ ಒಟ್ಟು 188 ಕೇಸ್ ದಾಖಲಾಗಿದ್ದು, 366 ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!