AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್​ಮೆಂಟ್​ನಲ್ಲಿ ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ

ಬೆಂಗಳೂರಿನ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದಲ್ಲಿ 3 ಕೋಟಿ ರೂಪಾಯಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಪೊಲೀಸರು ಕೇರಳ ಮೂಲದ ಆರೋಪಿ ಸಚಿನ್​ ನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಬೆಂಗಳೂರು ಪೊಲೀಸರು ಕಳೆದ ಒಂದು ತಿಂಗಳಲ್ಲಿ ಡ್ರಗ್ ಕೇಸ್‌ಗಳಲ್ಲಿ 59 ಜನರನ್ನು ಬಂಧಿಸಿದ್ದಾರೆ ಮತ್ತು ದೊಡ್ಡ ಪ್ರಮಾಣದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಅಪಾರ್ಟ್​ಮೆಂಟ್​ನಲ್ಲಿ ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ
ಅಪಾರ್ಟ್​ಮೆಂಟ್​​ನಲ್ಲಿ ಸಿಕ್ಕ ಗಾಂಜಾ
ರಾಮು, ಆನೇಕಲ್​
| Edited By: ವಿವೇಕ ಬಿರಾದಾರ|

Updated on: May 09, 2025 | 3:36 PM

Share

ಬೆಂಗಳೂರು, ಮೇ 09: ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಕರ್ಪೂರು ಗ್ರಾಮದಲ್ಲಿನ ಅಪಾರ್ಟ್​ಮೆಂಟ್​ವೊಂದರಲ್ಲಿ 3 ಕೋಟಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಂಗ್ರಹಿಸಿದ್ದ ಕೇರಳ ಮೂಲದ ಆರೋಪಿ ಸಚಿನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಾದ ರಾಶಿ, ಸಂಜು ಮತ್ತು ಉಮೇದ್ ಪರಾರಿಯಾಗಿದ್ದಾರೆ. ಆರೋಪಿ ಸಚಿನ್​ ಕೂಡ ಮೊದಲ ಮಹಡಿಯಿಂದ ಹಾರಿ ಪರಾರಿಯಾಗಲು ಯತ್ನಿಸಿದನು.

ಆದರೆ, ಕಾಲು ಮುರಿದು ಕುಸಿದು ಬಿದ್ದಿದ್ದಾನೆ. ಗಾಯಾಳು ಆರೋಪಿ ಸಚಿನ್​ನನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್ ಠಾಣೆ ಪೊಲೀಸರು ಅಪಾರ್ಟ್​ಮೆಂಟ್​ನಲ್ಲಿ ಶೋಧ ಮುಂದುವರೆಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಿ ಕೆ ಬಾಬಾ, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಗಳು ಹೊರರಾಜ್ಯಗಳಿಂದ ಗಾಂಜಾ ತರಿಸಿ, ಅಪಾರ್ಟ್ಮೆಂಟ್​ನಲ್ಲಿ ಸಣ್ಣ ಸಣ್ಣ ಪ್ಯಾಕೆಟ್​ಗಳಲ್ಲಿ ಪ್ಯಾಕ್ ಮಾಡುತ್ತಿದ್ದರು. ಬಳಿಕ ಆರೋಪಿಗಳು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಇದ್ದ ಕೊಠಡಿಯಲ್ಲಿ ವೇಯಿಂಗ್ ಸ್ಕೇಲ್, ಪ್ಯಾಕಿಂಗ್ ಟೇಪ್, ರಾಶಿ ರಾಶಿ ಗಾಂಜಾ ಪಾಕೇಟ್ಗಳು ಪತ್ತೆಯಾಗಿವೆ.

ಇದನ್ನೂ ಓದಿ
Image
ಸುಳ್ಳು ಸುದ್ದಿಗಳನ್ನ ಹರಡುವವರ ವಿರುದ್ಧ ಕ್ರಮ: ದಯಾನಂದ್ ಎಚ್ಚರಿಕೆ
Image
ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು
Image
ಪಾಕ್​ಗೆ ತೆರಳಲು ಸಮಯ ಕೋರಿದ್ದ ಅರ್ಜಿ ವಜಾ, ಕೋರ್ಟ್ ಹೇಳಿದ್ದೇನು?
Image
ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ

ಡ್ರಗ್​ ಕೇಸ್​ನಲ್ಲಿ 59 ಆರೋಪಿಗಳು ಅರೆಸ್ಟ್​

ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 1 ತಿಂಗಳಲ್ಲಿ ಡ್ರಗ್​ ಕೇಸ್​ನಲ್ಲಿ 59 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಬಳಿ ಇದ್ದ 208 ಕೆಜಿ ಗಾಂಜಾ, 22 ಗ್ರಾಂ ಹೆರಾಯಿನ್, 1 ಕೆಜಿ ಎಂಡಿಎಂಎ, 32 ಟೈಡಲ್ ಮಾತ್ರೆಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಹೈಅಲರ್ಟ್: 3 ಗಂಟೆ ಮುಂಚಿತವಾಗಿ ಬರಲು ಪ್ರಯಾಣಿಕರಿಗೆ ಸೂಚನೆ

ಗ್ಯಾಮ್ಲಿಂಗ್ ಸಂಬಂಧ 55 ಕೇಸ್ ದಾಖಲಿಸಿಕೊಂಡು 205 ಆರೋಪಿಗಳನ್ನು ಬಂಧಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ 23 ಕೇಸ್ ದಾಖಲಿಸಿ 30 ಜನರನ್ನು ಬಂಧಿಸಿದ್ದಾರೆ. ಅಕ್ರಮ ಮಾನವ ಕಳ್ಳಸಾಗಣೆ 8 ಕೇಸ್ ದಾಖಲು, 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ 9 ಮಂದಿ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಹಾಗೇ ವಿವಿಧ ಸೆಕ್ಷನ್ ಅಡಿಯಲ್ಲಿ 1 ತಿಂಗಳಲ್ಲಿ ಒಟ್ಟು 188 ಕೇಸ್ ದಾಖಲಾಗಿದ್ದು, 366 ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ