AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ ಸಿಬ್ಬಂದಿ ಕಮಿಷನ್​ ದಂಧೆ: ಬಡರೋಗಿಗಳ ಪರದಾಟ, ಒಂದೇ ದಿನಕ್ಕೆ 30 ಸಾವಿರ ರೂ. ಬಿಲ್​​

ಖಾಸಗಿ ಆಸ್ಪತ್ರೆಯವರು ನೀಡುವ ಕಮಿಷನ್​ ಆಸೆಗಾಗಿ ಪ್ರತಿ ಬಾರಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ 108 ಸಿಬ್ಬಂದಿ ದಾಖಲಿಸುತ್ತಿದ್ದ. ಕಮಿಷನ್​ ಆಸೆಗಾಗಿ ರೋಗಿಗಳೊಂದಿಗೆ ಚೆಲ್ಲಾಟ ಮಾಡಿದ್ದು, ಬಡರೋಗಿಗಳು ಪರದಾಟವಂತಾಗಿದೆ.

108 ಆ್ಯಂಬುಲೆನ್ಸ್​ ಸಿಬ್ಬಂದಿ ಕಮಿಷನ್​ ದಂಧೆ: ಬಡರೋಗಿಗಳ ಪರದಾಟ, ಒಂದೇ ದಿನಕ್ಕೆ 30 ಸಾವಿರ ರೂ. ಬಿಲ್​​
108 ಆ್ಯಂಬುಲೆನ್ಸ್​ ಸಿಬ್ಬಂದಿ ಕಮಿಷನ್​ ದಂಧೆ
ಗಂಗಾಧರ​ ಬ. ಸಾಬೋಜಿ
|

Updated on:Mar 16, 2023 | 6:57 PM

Share

ಬೆಂಗಳೂರು ಗ್ರಾಮಾಂತರ: 108 ಆ್ಯಂಬುಲೆನ್ಸ್​​​ ಸಿಬ್ಬಂದಿ ಕಮಿಷನ್ (commission)​ ಆಸೆಗಾಗಿ ಬಡರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಂದೇ ದಿನಕ್ಕೆ 30 ಸಾವಿರ ರೂ. ಬಿಲ್​​ ಮಾಡಿರುವಂತಹ ಘಟನೆ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. 108 ಆ್ಯಂಬುಲೆನ್ಸ್​ ಸಿಬ್ಬಂದಿ ಕಮಿಷನ್​ ದಂಧೆ ಟಿವಿ9 ಕ್ಯಾಮರಾದಲ್ಲಿ ಸೆರೆ ಆಗಿದೆ. ಖಾಸಗಿ ಆಸ್ಪತ್ರೆಯವರು ನೀಡುವ ಕಮಿಷನ್​ ಆಸೆಗಾಗಿ ಪ್ರತಿ ಬಾರಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ 108 ಸಿಬ್ಬಂದಿ ದಾಖಲಿಸುತ್ತಿದ್ದ. ಕಮಿಷನ್​ ಆಸೆಗಾಗಿ ರೋಗಿಗಳೊಂದಿಗೆ ಚೆಲ್ಲಾಟ ಮಾಡಿದ್ದು, ಬಡರೋಗಿಗಳು ಪರದಾಟವಂತಾಗಿದೆ. 30 ಸಾವಿರ ರೂ. ಬಿಲ್​ ನೋಡಿ ಬಡರೋಗಿ ಸಂಬಂಧಿಕರು ಸುಸ್ತಾಗಿದ್ದು, ಆ್ಯಂಬುಲೆನ್ಸ್​​​ ಸಿಬ್ಬಂದಿ ವಿರುದ್ಧ ರೋಗಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಆಸ್ಪತ್ರೆ ಡಿಸ್ಕೌಂಟ್​ ನೀಡಿ ಕಳಿಹಿಸಿದೆ. ಆಸ್ಪತ್ರೆ ಬಳಿ ಟಿವಿ9 ಕ್ಯಾಮರಾ ಕಂಡು ಆ್ಯಂಬುಲೆನ್ಸ್​ ಸಿಬ್ಬಂದಿ ತಬ್ಬಿಬ್ಬಾಗಿದ್ದು, ರೋಗಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನು ಸಿಬ್ಬಂದಿ ವಿರುದ್ಧ ದೂರು ನೀಡಿದರೂ ಕ್ರಮಕೈಗೊಂಡಿಲ್ಲ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ನೆರವಾದ ಸಚಿವರು 

ಕೋಲಾರ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಸಚಿವ ಆರ್​.ಅಶೋಕ್ ಮತ್ತು ಮುನಿಸ್ವಾಮಿ ನೆರವಾಗಿದ್ದಾರೆ. ಕೋಲಾರದ ಹೊರವಲಯದ ಅರಾಭಿಕೊತ್ತನೂರು ಹೆದ್ದಾರಿಯಲ್ಲಿ ಸಚಿವರು ತೆರಳುತಿದ್ದರು. ಈ ವೇಳೆ ಬೈಕ್ ಅಪಘಾತವಾಗಿ ಕೋಲಾರದ ಅಖೀಬ್ ಹಾಗೂ ಆತನ ಸ್ನೇಹಿತ ಗಾಯಗೊಂಡಿದ್ದರು. ಇದನ್ನು ಗಮನಿಸಿದ ಸಚಿವ ಆರ್​.ಅಶೋಕ್ ಹಾಗೂ ಮುನಿಸ್ವಾಮಿ, ಇಬ್ಬರು ಯುವಕರನ್ನು ತಮ್ಮ ಬೆಂಗಾವಲು ಪೊಲೀಸ್​ ವಾಹನದಲ್ಲಿ ಆಸ್ಪತ್ರೆಗೆ ರವಾನೆ ಮಾಡಲು ಹೇಳಿದ್ದಾರೆ.

ಇದನ್ನೂ ಓದಿ: Bagalakote: ಕೊಟ್ಟ ಸಾಲ ಸ್ನೇಹಿತರು ವಾಪಸ್ ನೀಡದಿದ್ದಕ್ಕೆ ಪಶುವೈದ್ಯ ಆತ್ಮಹತ್ಯೆ!

ಇನ್ನು ಆರ್.ಅಶೋಕ್ ಹಾಗೂ ಮುನಿಸ್ವಾಮಿ ವಿಜಯ ಸಂಕಲ್ಪ ಯಾತ್ರೆಗೆ ತೆರಳುತ್ತಿದ್ದಾಗ, ದಾರಿ ಬದಿ ಅಪಘಾತ ಗಮನಿಸಿ, ನಮಗೆ ಎಸ್ಕಾರ್ಟ್​ ಬೇಡ ಮೊದಲು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ನಾಯಕರ ಕಳಕಳಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:37 pm, Thu, 16 March 23

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ