AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಮಕ್ಕಳು ಸೇರಿದಂತೆ 14 ಜನರ ಮೇಲೆ ಬೀದಿ‌ ನಾಯಿಗಳ ದಾಳಿ

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ರಸ್ತೆಯಲ್ಲಿ ಓಡಾಡುವುದಕ್ಕೂ ಜನ ಭಯಪಡುವಂತಾಗಿದೆ. ಹತ್ತು ಮಕ್ಕಳು ಹಾಗು ನಾಲ್ಕು ಪುರುಷರನ್ನ ಈಗಾಗಲೇ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದೊಡ್ಡಬಳ್ಳಾಪುರ: ಮಕ್ಕಳು ಸೇರಿದಂತೆ 14 ಜನರ ಮೇಲೆ ಬೀದಿ‌ ನಾಯಿಗಳ ದಾಳಿ
ಬೀದಿ ನಾಯಿಗಳು
TV9 Web
| Edited By: ಆಯೇಷಾ ಬಾನು|

Updated on: Nov 14, 2023 | 3:08 PM

Share

ದೊಡ್ಡಬಳ್ಳಾಪುರ, ನ.14: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ‌ನಾಯಿಗಳ (Street Dogs) ಅಟ್ಟಹಾಸ ಮಿತಿ ಮೀರಿದೆ. ಕಳೆದ ರಾತ್ರಿಯಿಂದ 14 ಮಂದಿ‌ ಮೇಲೆ ಬೀದಿ‌ ನಾಯಿಗಳು ದಾಳಿ ನಡೆಸಿವೆ. ನಗರದ ಟಿಬಿ ಸರ್ಕಲ್, ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ, ಡಿ ಕ್ರಾಸ್‌ ಸೇರಿದಂತೆ ಹಲವು ಕಡೆ ಬೀದಿ ನಾಯಿಗಳು ದಾಳಿ ಮಾಡಿವೆ. ರಸ್ತೆಯಲ್ಲಿ ಹೋಗುತ್ತಿದ್ದ ಮಕ್ಕಳು ಸೇರಿದಂತೆ ಪುರುಷರ ಮೇಲೆ ಬೀದಿ ನಾಯಿಗಳು ಎರಗಿವೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ದೊಡ್ಡಬಳ್ಳಾಪುರ ಜನ ಬೆಚ್ಚಿಬಿದ್ದಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ರಸ್ತೆಯಲ್ಲಿ ಓಡಾಡುವುದಕ್ಕೂ ಜನ ಭಯಪಡುವಂತಾಗಿದೆ. ಹತ್ತು ಮಕ್ಕಳು ಹಾಗು ನಾಲ್ಕು ಪುರುಷರನ್ನ ಈಗಾಗಲೇ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ವ್ಯಕ್ತಿಯನ್ನು ಕೊಂದ ಮಂಗ ಕೊನೆಗೂ ಸೆರೆ

ಕೊನೆಗೂ ಸೆರೆ ಸಿಕ್ಕ ಕಿಲ್ಲರ್ ಕೋತಿ

ಇನ್ನು ಮತ್ತೊಂದೆಡೆ ದಾವಣಗೆರೆಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಕಿಲ್ಲರ್ ಕೋತಿಯನ್ನು ಸೆರೆ ಹಿಡಿಯಲಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕೋತಿಯೊಂದು ಗುತ್ಯಪ್ಪ (60) ಎಂಬುವವರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಜೊತೆಗೆ ಮತೋರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು. ಸದ್ಯ ಕಿಲ್ಲರ್ ಕೋತಿಯನ್ನು ಸೆರೆ ಹಿಡಿಯಲಾಗಿದೆ. ನಿನ್ನೆಯಿಂದ ಕೋತಿಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದರು. ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಗೆ ಕೋತಿ ಸಿಕ್ಕಿ ಬಿದ್ದಿದೆ. ಸದ್ಯ ಕೋತಿಯನ್ನು ಬೋನ್​ನಲ್ಲಿ ಇಡಲಾಗಿದೆ. ಗ್ರಾಮಕ್ಕೆ ಕಾಡುಪ್ರಾಣಿಗಳಿಂದ ರಕ್ಷಣೆ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಹಾಗೂ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!