AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಮಕ್ಕಳು ಸೇರಿದಂತೆ 14 ಜನರ ಮೇಲೆ ಬೀದಿ‌ ನಾಯಿಗಳ ದಾಳಿ

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ರಸ್ತೆಯಲ್ಲಿ ಓಡಾಡುವುದಕ್ಕೂ ಜನ ಭಯಪಡುವಂತಾಗಿದೆ. ಹತ್ತು ಮಕ್ಕಳು ಹಾಗು ನಾಲ್ಕು ಪುರುಷರನ್ನ ಈಗಾಗಲೇ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದೊಡ್ಡಬಳ್ಳಾಪುರ: ಮಕ್ಕಳು ಸೇರಿದಂತೆ 14 ಜನರ ಮೇಲೆ ಬೀದಿ‌ ನಾಯಿಗಳ ದಾಳಿ
ಬೀದಿ ನಾಯಿಗಳು
TV9 Web
| Updated By: ಆಯೇಷಾ ಬಾನು|

Updated on: Nov 14, 2023 | 3:08 PM

Share

ದೊಡ್ಡಬಳ್ಳಾಪುರ, ನ.14: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ‌ನಾಯಿಗಳ (Street Dogs) ಅಟ್ಟಹಾಸ ಮಿತಿ ಮೀರಿದೆ. ಕಳೆದ ರಾತ್ರಿಯಿಂದ 14 ಮಂದಿ‌ ಮೇಲೆ ಬೀದಿ‌ ನಾಯಿಗಳು ದಾಳಿ ನಡೆಸಿವೆ. ನಗರದ ಟಿಬಿ ಸರ್ಕಲ್, ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ, ಡಿ ಕ್ರಾಸ್‌ ಸೇರಿದಂತೆ ಹಲವು ಕಡೆ ಬೀದಿ ನಾಯಿಗಳು ದಾಳಿ ಮಾಡಿವೆ. ರಸ್ತೆಯಲ್ಲಿ ಹೋಗುತ್ತಿದ್ದ ಮಕ್ಕಳು ಸೇರಿದಂತೆ ಪುರುಷರ ಮೇಲೆ ಬೀದಿ ನಾಯಿಗಳು ಎರಗಿವೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ದೊಡ್ಡಬಳ್ಳಾಪುರ ಜನ ಬೆಚ್ಚಿಬಿದ್ದಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ರಸ್ತೆಯಲ್ಲಿ ಓಡಾಡುವುದಕ್ಕೂ ಜನ ಭಯಪಡುವಂತಾಗಿದೆ. ಹತ್ತು ಮಕ್ಕಳು ಹಾಗು ನಾಲ್ಕು ಪುರುಷರನ್ನ ಈಗಾಗಲೇ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ವ್ಯಕ್ತಿಯನ್ನು ಕೊಂದ ಮಂಗ ಕೊನೆಗೂ ಸೆರೆ

ಕೊನೆಗೂ ಸೆರೆ ಸಿಕ್ಕ ಕಿಲ್ಲರ್ ಕೋತಿ

ಇನ್ನು ಮತ್ತೊಂದೆಡೆ ದಾವಣಗೆರೆಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಕಿಲ್ಲರ್ ಕೋತಿಯನ್ನು ಸೆರೆ ಹಿಡಿಯಲಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕೋತಿಯೊಂದು ಗುತ್ಯಪ್ಪ (60) ಎಂಬುವವರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಜೊತೆಗೆ ಮತೋರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು. ಸದ್ಯ ಕಿಲ್ಲರ್ ಕೋತಿಯನ್ನು ಸೆರೆ ಹಿಡಿಯಲಾಗಿದೆ. ನಿನ್ನೆಯಿಂದ ಕೋತಿಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದರು. ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಗೆ ಕೋತಿ ಸಿಕ್ಕಿ ಬಿದ್ದಿದೆ. ಸದ್ಯ ಕೋತಿಯನ್ನು ಬೋನ್​ನಲ್ಲಿ ಇಡಲಾಗಿದೆ. ಗ್ರಾಮಕ್ಕೆ ಕಾಡುಪ್ರಾಣಿಗಳಿಂದ ರಕ್ಷಣೆ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಹಾಗೂ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!