AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಮಕ್ಕಳು ಸೇರಿದಂತೆ 14 ಜನರ ಮೇಲೆ ಬೀದಿ‌ ನಾಯಿಗಳ ದಾಳಿ

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ರಸ್ತೆಯಲ್ಲಿ ಓಡಾಡುವುದಕ್ಕೂ ಜನ ಭಯಪಡುವಂತಾಗಿದೆ. ಹತ್ತು ಮಕ್ಕಳು ಹಾಗು ನಾಲ್ಕು ಪುರುಷರನ್ನ ಈಗಾಗಲೇ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದೊಡ್ಡಬಳ್ಳಾಪುರ: ಮಕ್ಕಳು ಸೇರಿದಂತೆ 14 ಜನರ ಮೇಲೆ ಬೀದಿ‌ ನಾಯಿಗಳ ದಾಳಿ
ಬೀದಿ ನಾಯಿಗಳು
TV9 Web
| Edited By: ಆಯೇಷಾ ಬಾನು|

Updated on: Nov 14, 2023 | 3:08 PM

Share

ದೊಡ್ಡಬಳ್ಳಾಪುರ, ನ.14: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ‌ನಾಯಿಗಳ (Street Dogs) ಅಟ್ಟಹಾಸ ಮಿತಿ ಮೀರಿದೆ. ಕಳೆದ ರಾತ್ರಿಯಿಂದ 14 ಮಂದಿ‌ ಮೇಲೆ ಬೀದಿ‌ ನಾಯಿಗಳು ದಾಳಿ ನಡೆಸಿವೆ. ನಗರದ ಟಿಬಿ ಸರ್ಕಲ್, ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ, ಡಿ ಕ್ರಾಸ್‌ ಸೇರಿದಂತೆ ಹಲವು ಕಡೆ ಬೀದಿ ನಾಯಿಗಳು ದಾಳಿ ಮಾಡಿವೆ. ರಸ್ತೆಯಲ್ಲಿ ಹೋಗುತ್ತಿದ್ದ ಮಕ್ಕಳು ಸೇರಿದಂತೆ ಪುರುಷರ ಮೇಲೆ ಬೀದಿ ನಾಯಿಗಳು ಎರಗಿವೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ದೊಡ್ಡಬಳ್ಳಾಪುರ ಜನ ಬೆಚ್ಚಿಬಿದ್ದಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ರಸ್ತೆಯಲ್ಲಿ ಓಡಾಡುವುದಕ್ಕೂ ಜನ ಭಯಪಡುವಂತಾಗಿದೆ. ಹತ್ತು ಮಕ್ಕಳು ಹಾಗು ನಾಲ್ಕು ಪುರುಷರನ್ನ ಈಗಾಗಲೇ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ವ್ಯಕ್ತಿಯನ್ನು ಕೊಂದ ಮಂಗ ಕೊನೆಗೂ ಸೆರೆ

ಕೊನೆಗೂ ಸೆರೆ ಸಿಕ್ಕ ಕಿಲ್ಲರ್ ಕೋತಿ

ಇನ್ನು ಮತ್ತೊಂದೆಡೆ ದಾವಣಗೆರೆಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಕಿಲ್ಲರ್ ಕೋತಿಯನ್ನು ಸೆರೆ ಹಿಡಿಯಲಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕೋತಿಯೊಂದು ಗುತ್ಯಪ್ಪ (60) ಎಂಬುವವರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಜೊತೆಗೆ ಮತೋರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು. ಸದ್ಯ ಕಿಲ್ಲರ್ ಕೋತಿಯನ್ನು ಸೆರೆ ಹಿಡಿಯಲಾಗಿದೆ. ನಿನ್ನೆಯಿಂದ ಕೋತಿಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದರು. ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಗೆ ಕೋತಿ ಸಿಕ್ಕಿ ಬಿದ್ದಿದೆ. ಸದ್ಯ ಕೋತಿಯನ್ನು ಬೋನ್​ನಲ್ಲಿ ಇಡಲಾಗಿದೆ. ಗ್ರಾಮಕ್ಕೆ ಕಾಡುಪ್ರಾಣಿಗಳಿಂದ ರಕ್ಷಣೆ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಹಾಗೂ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ